Home / ಕವನ / ಕವಿತೆ / ಬಯಕೆ

ಬಯಕೆ

ಬಯಕೆಯೊಂದದು
ಮನದೊಳಂದುದು
ಎನಿತೆನಿತೊ ತವಕದಿ ಮೂಡುತೆ,
ಹಿತದ, ಹಿತಕೆ
ನಿಸ್ಪೃಹದ ನೇರಕೆ
ಇನಿಸು ತಪ್ಪದೆಡೆ ಮಾಡುತೆ |

ಹೊಂಬೆಳಗಲ್ಲರಳಿ, ಸೌಗಂಧ ಸೂಸಿ
ತನಿಗಾಳಿಯೋಳ್ ಬೆರೆತು ಮಕರಂದ ನೀಡೆ
ಮಣ್ಣು – ಮುಗಿಲನೆ ಕಂಡು ದಿನವೆಲ್ಲ ಘಮಘಮಿಸಿ
ನಸುನಗುವ ನಂದನದ ಹೂವಾಗೋ ಬಯಕೆ

ಬಯಕೆಯೊಂದದು
ಮನದೊಳಂದುದು
ಎನಿತೆನಿತೊ ತವಕದಿ ಮೂಡುತೆ
ಹಿತದ, ಹಿತಕೆ
ನಿಸ್ಪೃಹದ ನೇರಕೆ
ಇನಿಸು ತಪ್ಪದೆಡೆ ಮಾಡುತೆ

ಬೆಟ್ಟ ಗುಡ್ಡ ಸಾಲಲಿ ಪಯಣಿಗರ ಪಥದಲಿ
ತಣ್ಣೆಳಲನಿತ್ತು, ಸವಿ ಫಲವ ನೀಡೆ
ಕಡಿದುರಿಯೊಳಿಟ್ಟರು, ಬೆಂದುದನುಂಡವರಲಿ
ಸಂತೃಪ್ತವಾಗೋ ಗಿಡ-ಮರವಾಗುವಾ ಬಯಕೆ

ಬಯಕೆಯೊಂದದು
ಮನದೊಳಂದದು
ಎನಿತೆನಿತೊ ತವಕದಿ ಮೂಡುತೆ
ಹಿತದ, ಹಿತಕೆ
ನಿಸ್ಪೃಹದ ನೇರಕೆ
ಇನಿಸು ತಪ್ಪದೆಡೆ ಮಾಡುತೆ

ಗಿರಿಶೃಂಗದಿಂದಲಿ ಧುಮ್ಮಿಕ್ಕಿ ನಲಿಯುತ
ತೊರೆ ನದಿಯಾಗಿ ಸಾಗರೆಡೆಗೆ ಓಡೆ
ಹಾದಿ ಹಾದಿಯಿಕ್ಕೆಲದ ಹಸಿರ ಹೆಸರ ಕಾಣುತ
ಜೀವದೆದೆಯ ದಾಹಕೆ ಧಾರೆಯಾಗುವ ಬಯಕೆ

ಬಯಕೆಯೊಂದದು
ಮನದೊಳಂದದು
ಎನಿತೆನಿತೊ ತವಕದಿ ಮೂಡುತೆ
ಹಿತದ, ಹಿತಕೆ
ನಿಸ್ಪೃಹದ ನೇರಕೆ
ಇನಿಸು ತಪ್ಪದೆಡೆ ಮಾಡುತೆ.

ಭುವಿ ಬಾನ ಬಿತ್ತರ ಕಡಲೈಸಿರಿಯ ಚಿತ್ತರ
ಬಯಲ ಬಯಲ ಸೀಮಾ ಸೀಮೆಗಳಾಚೆ
ದಾಟಿ ದಾಟಿದ ರೆಕ್ಕೆ-ಪುಕ್ಕ ಬಲದ ಸಿಂಗರ
ಪಾರತಂತ್ರ ತೊರೆದಾ ಹಕ್ಕಿಯಾಗುವ ಬಯಕೆ

ಬಯಕೆಯೊಂದದು
ಮನದೊಳಂದದು
ಎನಿತೆನಿತೊ ತವಕದಿ ಮೂಡುತೆ
ಹಿತದ ಹಿತಕೆ
ನಿಸ್ಪೃಹದ ನೇರಕೆ
ಇನಿಸು ತಪ್ಪದೆಡೆ ಮಾಡುತೆ

ಕಂಡ ಅಗುಳಿಗೆ ತನ್ನ ಬಳಗವ ಕೂಗಿ ಕರೆಯುವ
ಹಂಚಿಕೊಳುತ ನೇಹದ ಮಮತೆ ಮೂಡೆ
ಗೂಡ ಕಟ್ಟಿದ ಪಿಕದ ಕುಲಕೂ ಗುಟಕನೀಯುವ
ಒಲವೆದೆಯ ಗೂಡಿನ ‘ಕಾಕ’ವಾಗುವ ಬಯಕೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...