ಅಂತರ್ದರ್ಶನ

ಭಾವ ರವಿಯೆ ಶಮ ಶಾಂತ ಶಶಿಯೆ
ನಿನ್ನ ನೋಟ ದಾಳವೆತ್ತರ ನಿಲುಕದು

ಕಸವೊಽ ರಸವೊಽ
ಸರಸ ವಿರಸವೊಽ
ನಿನ್ನ ನೋಟದಿ ಸಮರಸ

ಮುಗಿಲಿನೆದೆಗೂ ಮಣ್ಣ ವಾಸನೆ
ತೋರೋ ನಿನ್ನಯ ಗಾರುಡಿ
ಕಡಲ ತೆರೆಯ ನೊರೆಯ ತೊರೆಗೊ
ಕಣ್ಣೀರ ಛಾಯೆಯ ಮುನ್ನುಡಿ

ಬೀಸೊ ಗಾಳಿಗೂ ಭಾವ ಸಾಸಿರ
ಜೀವ ಜಲಕು ಒನಪಿನೋಗರ
ಪಂಕ್ತಿಯಲ್ಲೂ ಜಂಗಮದ ದರ್ಶನ
ಖಗ-ಮಿಗ-ಜಂತುಗಳಲೂ ನೇಹದ ಸ್ಪರ್ಶನಾಽ

ಹೆಪ್ಪುಗಟ್ಟಿ ಕರಗೊ ತುಹಿನವು
ನಿನ್ನ ಕಣ್ಣ ಕರಣಕೆ ಕಾರಣ
ವೈಶಾಖ, ವರ್ಷಿಣಿ, ಹಿಮಂತ ಸಾಲ್ಗಳು
ಪದ ಪಾದದಕ್ಕರ ತೋರಣ.

ಹುಟ್ಟು ಸಾವು ನೋವು ನಲಿವು
ನಿನಗಾತ್ಮಾನಂದದ ಸಂತಸ
ದೃಷ್ಟಿಯಂತರದೃಷ್ಟಿಯು
ನಿನ್ನ ಚಿತ್ತದೊಲ್ಮೆ ಬಲ್ಮೆಯ ನವರಸ

ಬಯಲ ಜಗದ ಬಯಲಗಣ್ಣಿಗೆ
ಬಯಲೆ ನೂಪುರದಾಲಯ
ಕವಿಯೆ ನಿನ್ನಯ ಕಾವ್ಯಗಣ್ಣಲಿ
ಬಯಲು ಬಯಲಿಗೂ ಶೃತಿಲಯ…..
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಲ್ಲಮ
Next post ಅಮರಾವತಿ

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…