ಅಕ್ಕನ ಭಾವಗೀತೆ

ಕೆಳದಿ ಕೇಳೆನ್ನೊಲವಿನಾ ಗಾಥೆಯ
ಕಣ್ಣದೀಪ್ತಿಯಿನಿಯನೊಲಿಸಿದಾ ಪರಿಯ

ಮೂಡಲದರುಣಗಿರಿ,
ಪಡುವಲದ ಶಶಿಶಿಖರ,
ಪಂಚ ಭೂತಗಳಲೆಲ್ಲ….. ನನಗೊಲಿದವನ ರೂಹು,
ಲತೆ ಲತೆಗಳಲರಲರು,
ಸುಮ ಸುಮದ ಘಮದಲ್ಲಿ,
ಸೊಗಸ ಕನಸಿನಿನಿಯನ…. ರೂಪ…. ತೇಜರಾಸಿ….

ಚಿತ್ರ-ಚಿತ್ತಾರವರಿತಂತೆ,
ಗೇಹ ಬೆಳೆ-ಬೆಳೆದಂತೆ,
ಮಾಗಿ ಮಾಗಿತು ಒಳಗೆ ಪ್ರೇಮ ಪಲ್ಲವಿಯ ಫಲವು,
ಕ್ಷಣ-ಚಣವು ಉನ್ಮಾದ,
ಆನಂದದಾನಂದ ಲೀಲೆಯಲಿ,
ಮನತುಡುಕುವೆಡೆಯಲ್ಲಿ ಮಲ್ಲಿಕಾರ್ಜುನ ನಿರವು.

ಬಯಲಿಗರ ಬನದೊಳಗೆ,
ಬಯಲಾದ ಮನದೊಳಗೆ,
ಬಯಲ ಕೈ ಹಿಡಿದೆ ನಾ ಬಾಳ ಬಂಡಿಯಲಿ
ಅನುಭವದನುಭಾವಿ
ವಚನ-ವಚನಗಳೊಲ್ಲರಿಯ
ಇನಿಯನಿನಿಯನ ನಿಜ ಭಾವಗೀತೆ ರಾಗದಲಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನ ಪತ್ರ
Next post ಶಾಂತಿಗಾಗಿ

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…