ಅಕ್ಕನ ಭಾವಗೀತೆ

ಕೆಳದಿ ಕೇಳೆನ್ನೊಲವಿನಾ ಗಾಥೆಯ
ಕಣ್ಣದೀಪ್ತಿಯಿನಿಯನೊಲಿಸಿದಾ ಪರಿಯ

ಮೂಡಲದರುಣಗಿರಿ,
ಪಡುವಲದ ಶಶಿಶಿಖರ,
ಪಂಚ ಭೂತಗಳಲೆಲ್ಲ….. ನನಗೊಲಿದವನ ರೂಹು,
ಲತೆ ಲತೆಗಳಲರಲರು,
ಸುಮ ಸುಮದ ಘಮದಲ್ಲಿ,
ಸೊಗಸ ಕನಸಿನಿನಿಯನ…. ರೂಪ…. ತೇಜರಾಸಿ….

ಚಿತ್ರ-ಚಿತ್ತಾರವರಿತಂತೆ,
ಗೇಹ ಬೆಳೆ-ಬೆಳೆದಂತೆ,
ಮಾಗಿ ಮಾಗಿತು ಒಳಗೆ ಪ್ರೇಮ ಪಲ್ಲವಿಯ ಫಲವು,
ಕ್ಷಣ-ಚಣವು ಉನ್ಮಾದ,
ಆನಂದದಾನಂದ ಲೀಲೆಯಲಿ,
ಮನತುಡುಕುವೆಡೆಯಲ್ಲಿ ಮಲ್ಲಿಕಾರ್ಜುನ ನಿರವು.

ಬಯಲಿಗರ ಬನದೊಳಗೆ,
ಬಯಲಾದ ಮನದೊಳಗೆ,
ಬಯಲ ಕೈ ಹಿಡಿದೆ ನಾ ಬಾಳ ಬಂಡಿಯಲಿ
ಅನುಭವದನುಭಾವಿ
ವಚನ-ವಚನಗಳೊಲ್ಲರಿಯ
ಇನಿಯನಿನಿಯನ ನಿಜ ಭಾವಗೀತೆ ರಾಗದಲಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನ ಪತ್ರ
Next post ಶಾಂತಿಗಾಗಿ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…