ಕಾಲ

ಬೆಳಕಿನನುರಣದ…. ನಿತ್ಯ
ಸರದಿಯೊಳಗೆ…. ದಿನಗಳರಳುತಿವೆ
ಜೀವಂತ…. ಧಾವಂತ…. ನಿಯತಿಗಾಗಿ
ನಿದ್ದೆ ಕಳೆದೆದ್ದವರ ಬದುಕಿಗಾಗಿ
ಅವರವರು ತೆರೆದಿಟ್ಟ…. ಬಾಳ ಬಂಡಿಗಾಗಿ
ಸ್ಪುರಣೆಗಳೆಲ್ಲದರ ಪರಿವೆಯಿರದೆ
ಜಗದ ಜಂಗಮತೆಯ ಚಂಚಲ
ಧೃವ ಜ್ಯೋತಿಯಲ್ಲಿ….
ಕತ್ತಲೂ ಕವಿಯುತ್ತಲೇ
ಇರುತ್ತದೆ…. ಹಗಲ
ಪುನರನುರಣಕಾಗಿ….
ನಿಶಾಚಾರ…. ಉಷಾಚರಿಗಳ
ಪಾಡು-ಹಾಡಿನ ಪರಿವೆ ಪರಿಧಿಯಾಚೆ
ಎದ್ದರೂ ಮಲಗಿದಂತಿರುವ
ಮಲಗಿದಲ್ಲಿಯೇ
ಬೆಳಕನ್ನು ಜರಿಯುವವರನ್ನು
ಕಾಲವೇ ಹಣಿಯುತ್ತದೆ
ಅಗ್ಗಿಷ್ಟಿಕೆಯ ಕುಂಡದಲ್ಲಿ
ನಿದ್ರೆಯರಿವು-ಪರಿವುಗಳಿರದೆ
ಬೆಳಕಿನಲಿ ಸಾಗುವವರಿಗೆ
ಕಾಲವೇ ಮಣಿಯುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆರೆ
Next post ಸ್ಥಿತ್ಯಂತರ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

cheap jordans|wholesale air max|wholesale jordans|wholesale jewelry|wholesale jerseys