ಅರಿವ ಮರತೆ

ಯಾರಿಹರು ಬನ್ನಿರೋ; ದೀಪವೊಂದನು ತನ್ನಿರೋ
ಕಡಿಯಿತೊಂದೇನೋ ಈ ಕತ್ತಲಲ್ಲಿ
ತಾಳಲಾರೆನು; ಎಲ್ಲಿ ಹೋಗಿರುವಿರೋ?
ನಾ ಮಾಡಬಲ್ಲೆನೇನು ಕಾವಳಲ್ಲಿ !

ಅವ್ವ ಬರಲಿಲ್ಲ, ಅಕ್ಕ ಇಲ್ಲಿಲ್ಲ, ಮತ್ತಾರ ಸುಳಿವಿಲ್ಲ
ನಮ್ಮಮ್ಮ ಹೋದವಳು ಬರಲೇ ಇಲ್ಲ
ಯಾರು ಕಾಣುವದಿಲ್ಲ; ನೋವು ಕೇಳದಲ್ಲ !
ನಾನೇ ಒಬ್ಬವನು; ಕತ್ತಲು ಜಗವೆಲ್ಲ !

ನೋವು ಏರತ್ತಿದೆ, ಅರಿವು ಹಾರುತ್ತಿದೆ; ಮಾಡಲೇನು?
ಬಾಯತುಂಬೇನು? ಬುರುಗು; ಉಗುಳಲ್ಲ !
ಹಾವೇನು? ಅಯ್ಯೋ ತಿಳಿಯಲಿಲ್ಲೆನಗೆ ಹಾವಿನೀ ವಾಸ!
ಹಾ! ಉಸಿರಿದ್ದ ಅಜ್ಜ; ಮರೆತೆನಲ್ಲ !

ಸರಿಯುತಿದೆ, ಆ ಶಬ್ದ ಸರಸರನೆ ಓಡುತ್ತಿದೆ ಆಚೆಗೆ
ಅಕೋ ! ಕತ್ತಲೆಯೊಳು ಕರಿಯ ಹಾವು !!
ಕಡಿದಾಗ ಅರಿದೆ, ಮೊದಲೇ ಹೊಳೆಯಲಿಲ್ಲವೆನಗೆ
ಅರಿವ ನಾ ಮರೆತು ಬಂದಿತೀ ನೋವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಾತಕ
Next post ಸಮಾಜ

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

cheap jordans|wholesale air max|wholesale jordans|wholesale jewelry|wholesale jerseys