ಅಡುಗೆಯ ಮನೆಯ ನಾಟ್ಯ !

ಅಡುಗೆ ರಸರುಚಿ ವಾಸನೆಯ ಮೋಹ ಸವಿಗೆ
ಬಾಗದವನಾರು ಹೇಳು ?
ಕುರಿಯ ಕಾವ ಕುರುಬನೀಂ; ಧರೆಯ ಕಾವ ರಾಜಗೆ
ಪಕ್ವಾನ್ನ ನಾಕಕೆ ಅನ್ಯ ಕೀಳು

ಮೊಸರನ್ನ ಸಂಡಿಗೆ ಉಪ್ಪಿನಕಾಯ ಲೀಲಾಂಮೃತಕೆ
ಸಖ್ಯನಾಗದವನಾರು ಧೀರ ?
ರಣರಂಗ ಕಲಿಯೇನು; ಕಾಳಗದ ಹುಲಿಯೇನಿದಕೆ
ವಿಶ್ವ ಅಡುಗೆ ಶಾಲೆಗೆ ಕಿಂಕರ!

ಹಂಚಿನೆಣ್ಣೆಯ ಕೆರೆಯಲಿ ಚೆಕ್ಕಲಿಯ ಈ ಸಾಟಿ
ಕಂಡ ಬಾಯ್ಗೆಲ್ಲ ಕುಣಿದಾಟ
ಒಲೆಯ ಕೆಂಡದ ಮೇಲೆ ಹಪ್ಪಳದ ಚಲ್ಲಾಟ
ಉಂಡ ನಾಲ್ಗೆಲ್ಲ ಜಿಗಿದಾಟ

ನಯನ ಹೋಳಿಗೆ ಕಂಪು; ಮಾಡುವದು ಹೋಂಪುಳಿ
ಬಿಸಿ ಕಡಬು ತುಪ್ಪ ಸಾಕು!
ಬೆಣ್ಣೆ ಮಜ್ಜಿಗೆ ತರುವ ಕಡಗೋಲಿನಬ್ಬರ ಕೇಳಿ
ಬಾಯಿ ನೀರಾಗಲೇ ಬೇಕು

ದಪ್ಪ ಚಪಾತಿಯ ಮೇಲೆ ಕಡಲೆಯುಸುಳೆಯ ಮೇಲ್ಮೆ
ಮೊಸರು ಸುರಿಯಬೇಕು
ಸರ್ವ ರಸಾನ್ನಗಳ ಕೂಟ; ಕೈ ಬಾಯಿಗೆಲ್ಲ ಒಲ್ಮೆ
ರುಚಿಯೂಟ ನೋಡಬೇಕು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಸಾರ
Next post ಕವನವೆಂದರೆ

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

cheap jordans|wholesale air max|wholesale jordans|wholesale jewelry|wholesale jerseys