Home / ಕವನ / ಕವಿತೆ / ಶರಣ ಪಥ

ಶರಣ ಪಥ

ಎಣ್ಣೆ ದೀವಿಗೆ ಹಿಡಿದು ಪಥವನರಸುವ ವೀರ
ತಿಳಿಯಲಾರೆಯಾ ತಿಂಗಳನ ಬೆಳಕು ?
ಸವಿಯ ತಂಗಿರಣ ಛಾಯೆಗಂಜಿಹುದು ತಿಮಿರ !
ಬಾ ಇಲ್ಲಿ ಕಂಡಿಹುದು ದಿವ್ಯ ಬೆಳಕು!

ಭಕ್ತಿ ಬಾನಿನ ತಿಲಕ ಚಂದಿರನು ಬಸವಣ್ಣ
ಆ ಶರಣ ಸಾತ್ವಿಕತೆಯ ಸವಿಯ ಬಾ
ಲಾಸ್ಯ ಲಾವಣ್ಯದ ಲೀಲಾ ಬಲೆಗೆ ನೀನು
ಬಲಿಯಾಗದೇ ಭಾಗ್ಯವರಸ ಬಾ

ಮಿಂಚಿ ಬಂದಿಹವು ಮಾಯಜಾಲದ ಹಕ್ಕಿಗಳು
ಬಣ್ಣ ಬಲುಚಂದ; ನಾದ ಅಂದ
ಹಿಡಿಯಲೆಳಸಿ ಬೆಂಬತ್ತಿದೊಡೆ ಬಾಳು ಹಾಳು
ಕೇಳಿ ತಿಳಿದೇಳು ಶರಣರಿಂದ

ಶ್ಯಾಮವರ್ಣದ ಮಾಯ ಮುಗಿಲಿನಲಿ ಮಿಂಚಾಗಿ
ಚಿಮ್ಮಿಯದ್ದಳದೋ ಮಹದೇವಿಯಕ್ಕ
ಕಾರಿರುಳ ಕರಗಿಸಿ ಸಿಡಿವ ಕಡು ಸಿಡಿಲಾಗಿ
ಬಡಿದಳದೋ ಕಾಡಿಗೆ ಎಮ್ಮ ಭಾಗ್ಯದಕ್ಕ

ಸತ್ಯ ಮಿಥ್ಯದ ಘೋರ ರೌದ್ರ ರಣವು
ಬೆಳಕು ಕತ್ತಲೆಯ ವೀರ ಬಣವು
ನಮ್ಮ ಶರಣವೃಂದದ ಭಕ್ತಿ ಕಹಳೆ ಕೂಗಿದವು
ಶರಣರಿಗಿದಿರಾದ ಅಸುರರಿನ್ನಾವು?

ಮೌಡ್ಯ ಜಾಡ್ಯದ ಜಾಲ ಆವರಿಸಿ ನಿಂದಾಗ
ಬಂದರದೋ ಅವತಾರಿ ಅಲ್ಲಮರು
ಕಲ್ಯಾಣ ಮೇಲೆದ್ದು ; ಶೂನ್ಯಸಿಂಹಾಸನ ನಿಂದಾಗ
ಕ್ರೌರ್ಯ ತಿಮಿರದ ರೌದ್ರ ಶಾಂತ ಮಾಡಿದರು

ಸಾಸಿರಕು ಮಿಗಿಲಾದ ಲಿಂಗದೇವನ ದೂತರು
ಬಂದು ನಿಂದಾಗ ಬಸವಳಿದ ನೀನಾರು?
ದಾರಿಯರಿಯದ ನಿನಗೆ ಕಾದುನಿಂದಾಗ ಶರಣರು
ಎಣ್ಣೆದೀವಿಗೆ ಹಿಡಿದ ಧೀರ ಇನ್ನಾರು ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...