Home / ಕವನ / ಕವಿತೆ / ಶರಣ ಪಥ

ಶರಣ ಪಥ

ಎಣ್ಣೆ ದೀವಿಗೆ ಹಿಡಿದು ಪಥವನರಸುವ ವೀರ
ತಿಳಿಯಲಾರೆಯಾ ತಿಂಗಳನ ಬೆಳಕು ?
ಸವಿಯ ತಂಗಿರಣ ಛಾಯೆಗಂಜಿಹುದು ತಿಮಿರ !
ಬಾ ಇಲ್ಲಿ ಕಂಡಿಹುದು ದಿವ್ಯ ಬೆಳಕು!

ಭಕ್ತಿ ಬಾನಿನ ತಿಲಕ ಚಂದಿರನು ಬಸವಣ್ಣ
ಆ ಶರಣ ಸಾತ್ವಿಕತೆಯ ಸವಿಯ ಬಾ
ಲಾಸ್ಯ ಲಾವಣ್ಯದ ಲೀಲಾ ಬಲೆಗೆ ನೀನು
ಬಲಿಯಾಗದೇ ಭಾಗ್ಯವರಸ ಬಾ

ಮಿಂಚಿ ಬಂದಿಹವು ಮಾಯಜಾಲದ ಹಕ್ಕಿಗಳು
ಬಣ್ಣ ಬಲುಚಂದ; ನಾದ ಅಂದ
ಹಿಡಿಯಲೆಳಸಿ ಬೆಂಬತ್ತಿದೊಡೆ ಬಾಳು ಹಾಳು
ಕೇಳಿ ತಿಳಿದೇಳು ಶರಣರಿಂದ

ಶ್ಯಾಮವರ್ಣದ ಮಾಯ ಮುಗಿಲಿನಲಿ ಮಿಂಚಾಗಿ
ಚಿಮ್ಮಿಯದ್ದಳದೋ ಮಹದೇವಿಯಕ್ಕ
ಕಾರಿರುಳ ಕರಗಿಸಿ ಸಿಡಿವ ಕಡು ಸಿಡಿಲಾಗಿ
ಬಡಿದಳದೋ ಕಾಡಿಗೆ ಎಮ್ಮ ಭಾಗ್ಯದಕ್ಕ

ಸತ್ಯ ಮಿಥ್ಯದ ಘೋರ ರೌದ್ರ ರಣವು
ಬೆಳಕು ಕತ್ತಲೆಯ ವೀರ ಬಣವು
ನಮ್ಮ ಶರಣವೃಂದದ ಭಕ್ತಿ ಕಹಳೆ ಕೂಗಿದವು
ಶರಣರಿಗಿದಿರಾದ ಅಸುರರಿನ್ನಾವು?

ಮೌಡ್ಯ ಜಾಡ್ಯದ ಜಾಲ ಆವರಿಸಿ ನಿಂದಾಗ
ಬಂದರದೋ ಅವತಾರಿ ಅಲ್ಲಮರು
ಕಲ್ಯಾಣ ಮೇಲೆದ್ದು ; ಶೂನ್ಯಸಿಂಹಾಸನ ನಿಂದಾಗ
ಕ್ರೌರ್ಯ ತಿಮಿರದ ರೌದ್ರ ಶಾಂತ ಮಾಡಿದರು

ಸಾಸಿರಕು ಮಿಗಿಲಾದ ಲಿಂಗದೇವನ ದೂತರು
ಬಂದು ನಿಂದಾಗ ಬಸವಳಿದ ನೀನಾರು?
ದಾರಿಯರಿಯದ ನಿನಗೆ ಕಾದುನಿಂದಾಗ ಶರಣರು
ಎಣ್ಣೆದೀವಿಗೆ ಹಿಡಿದ ಧೀರ ಇನ್ನಾರು ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...