Home / ಕವನ / ಕವಿತೆ / ಗಾಂಜಾಡಾಲಿ

ಗಾಂಜಾಡಾಲಿ

ನಾ ಅಭಿಮಾನಿ
ನಾ ಭಾಽಳ ಸ್ವಾಭಿಮಾನಿ
ಯಾರಿಗೂ ಸೊಪ್ಪ ಹಾಕೋ
ಮಗ ನಾ ಅಲ್ಲ, ಅಂತಿದ್ಯಲ್ಲೊ…..?
ನಂದೂ ನಮ್ಮಪ್ಪಂದೂ ಮಾತ ಅಂದ್ರ
ಯಾವನೂ ಅಡ್ಡ ಹಾಕಾಕಿಲ್ಲ ಮಗ,
ಅಷ್ಟ ಅಲ್ಲೋಲೇಽ
ಯಾವ ಮಿನಿಸ್ಟ್ರೂ ಹೇಳಿದ್ಹಂಗ
ಕೇಳ್ತಾನ. ಯಾವ
ಬಡ್ಡಿ ಮಕ್ಕಳದೇನಂತ ಅಂತಿದ್ಯಲ್ಲೋ…..?
ಈಗ್ಯಾಕೋ
ನಿಂತ ನಿಂತಲ್ಲೇ
ಕುಂತ ಕುಂತಲ್ಲೇ
ಕೆಸರಾಗ, ಕಸದ ಗುಂಡ್ಯಾಗ ಬೀಳಾಕ್ಹತ್ತಿ
ಕಣ್ಣ್ಯಾಕ ತೇಲಕ್ಹತ್ಯಾವು
ಕುತಿಗ್ಯಾಕ ಬೀಳ್ಯಾಕ್ಹತ್ತೇತಿ
ಏನೋ ಸಮಾಚಾರ –
“ಅಫೀಮ್, ಗಾಂಜಾ, ಡಾಲಿ…..
ರೀನಾ, ಸು‍ಷುಮಾ, ಸರಿತಾ …. ”
ಅಲಽಲಽಲಽ ದೂರ ಹೋಗಿದಿಪಾ
ಬಾಯಿ ತೊದಲಾಕ್ಹತ್ತತಿ ಸಾಽಕ ಸಾಽಕ
ಇವ್ರ ಇರಬೇಕು
ನಿಂದು ನಿಮ್ಮಪ್ಪಂದು ಮಿನಿಷ್ಟ್ರುಗಳು
ಹೇಳಿದ್ಹಾಂಗ ಕೇಳಾವ್ರು
ನಿನ್ನ ಸ್ವಾಭಿಮಾನಕ ಕಿಮ್ಮತ್ತ ಕೊಡಾವ್ರು
ಭಲೇ ಭೇಷ್
ಗಾಂಜಾದ ಪ್ರತಿನಿಧಿಗೆ….. ಲೀ
ರೀನಾ ಡಾಲಿಗೆ…. ಲೀ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...