Home / ಕವನ / ಕವಿತೆ / ದೇಹ ತುಂಡಾಯ್ತು !

ದೇಹ ತುಂಡಾಯ್ತು !

ಮುಂದೆ ಇಡುವ ಅಡಿಯು ಜಾರಿ
ಓಡಿ ಬರುವ ಗಾಡಿ ಹಾರಿ
ತುಂಬಿತೇನೋ ಕೆಂಪು ರಂಗು ದಾರಿ
ಹಾ ಬಿದ್ದ ಜೀವ ಉಸಿರ ಕಾರಿ !

ಬಾಳಿಗೆಲಿವ ಧ್ಯೇಯ ಬಲಿ ಆಯ್ತು
ನಲಿವ ಹೊಸ ದೀಪ ನಂದಿ ಹೋಯ್ತು
ಎಲುಬು ಮಾಂಸ ಸಿಡಿದು ಹೋಳಾಯ್ತು
ತುಂಬಿ ಬೆಳೆದ ದೇಹ ತುಂಡಾಯ್ತು !

ಹರೆಯ ಮಗನ ನಂಬಿ ನಡೆದ
ತಾಯ ಕರುಳು ಹಾಯ್ ಭಸ್ಮವಾಯ್ತು
ನೀರ ನಡುವೆ ನಲಿದು ನಡೆದ
ಬಾಳ ಡೋಣಿ ಮುಳುಗಿ ಹೋಯ್ತು !

ಎದೆಯ ಒಡೆದು; ಗಾಡಿ ಓಡಿ
ಒಡಲ ಸೀಳಿ; ಜೀವ ಹೀರಿ
ಬೆಳೆವ ಬಾಳು ಹಾಳು ಮಾಡಿ
ಮೊಳಗಿತೇನೊ ಅಂತ್ಯ ಭೇರಿ !

ಅಳಲು ಉಕ್ಕಿ; ಕಡಲು ಕೂಡಿ
ಮುಸುಕಿತದೋ ಪ್ರಾಣ ಬೇಡಿ
ಎದೆಯ ಕೋಡಿ; ಮಣ್ಣ ರಕ್ತಮಾಡಿ
ಹರಿಯಿತಗೊ ಬಲಿಯ ನೀಡಿ !

ಸೆಳಕು ಮಿಂಚಾಗಿ ಹೋಯ್ತು ಸುದ್ದಿ
ತಾಯ ಹೃದಯ ಕರುಳ ತಾಕಿ
ಬೆಳೆವ ಮಗನ ನಂಬಿತ್ತು ಬುದ್ದಿ
ಹಾಯಿ ಹೋಳಾಯ್ತು ವಿಧಿಯು ತಾಕಿ!

ಕಂಡು ಕೇಳಿ ಹಿಂಡು ಜನ ಕೂಡಿತು
ನೆಲಕೆ ಬೆರೆತ ರಕ್ತ ಕಂಡಿತು
ಕಣ್ಣು ಮನವು ಗುಂಗು ಹಿಡಿಸಿತು
ಅಯ್ಯೋ ವಿಧಿಯು ಕೆಡಿಸಿತು!

ನನಸು ಊಹೆ ಕನಸಿಗಾಯಿತು
ಮುದಿಯ ತಾಯ ಕರುಳು ಕೊಚ್ಚಿತು
ಬಂದ ನಿಂದ ಸಂದಣಿಯು ಮಂದವಾಯಿತು
ದೈವ ಬಿಡದೆ ಗುಡುಗ ಹಾಕಿತು !
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...