ಉಷೆಗೆ

ಯುಗ ಯುಗಗಳೇಕಾಂತಗೀತ ಹಾಡುತನಂತ
ನೋವಿನಲಿ ಕಾತರಿಸಿ ನನ್ನ ಉಷೆ ಬಂದೆ.
ನಿನ್ನ ಬೆಳಕಲಿ ನಿನಗೆ ನನ್ನೆದೆಯ ಕಿರು ಹಣತೆ
ಅರ್ಪಿಸಿದೆ; ನೀನೂಪ್ಪಿ ಒಲವ ಬಾಳಿಸಿದೆ.

ನಾನು ಕವಿ, ನೀ ಕಾವ್ಯ ! – ನಾ ಬರೆದ ಗೀತಗಳು
ನಿನ್ನ ಒಲವಿನ ನೂರು ಸೊಗಸು ನೆರಳು !
ನೀ ಬೆಳಸಿ ಬಾಳಿಟ್ಟ ನನ್ನ ಕಾವ್ಯದ ಬಳ್ಳಿ
ಹೂವಿಡುವ ಮುನ್ನವೇ ನೀ ಬಾಡಿಹೋದೆ !

ಅಂದು, ನೀನಿದ್ದಾಗ, ಈ ಕವಿತೆಗಳ ಮಾಲೆ
ಒಲವ ಮಂಗಳಸೂತ್ರ ನಿನ್ನ ಕೊರಳಲ್ಲಿ-
ಆ ಆಸೆ ಇಂದೆಲ್ಲಿ ? – ಇವು ನಿನ್ನ ನೆನಪಿನಲಿ
ಹೃದಯ ಅರ್ಪಿಸುತ್ತಿರುವ ಭಾವದಶ್ರುಗಳು !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತನ್ನೊಳಗಣ ಕಿಚ್ಚು
Next post ಮಾಂತ್ರಿಕ

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…