ಕಾರಿರುಳ ಗವಿಯಲ್ಲಿ ಎಲ್ಲಿಂದಲೋ ಒಂದು
ಕಿರಣ ಒಳಹೊಕ್ಕಂತೆ, ನನ್ನ ಜೀವನದಲ್ಲಿ
ನಿನ್ನ ಎಳೆತನದ ನಗು ತುಂಬಿ ತೂರುತ ಬಂದು
ಬೆಳಗಿತ್ತು ಎದೆಯನ್ನು, ಹೃದಯದುಮ್ಮಳದಲ್ಲಿ,
ಆನಂದದೆಲರಿನಲಿ, ಕಳೆದ ಕಾಲದ ಕಳೆದ
ದುಸ್ವಪ್ನಗಳನೆಲ್ಲ ಮರೆತು ನಾ ಕುಣಿದಿದ್ದೆ.
ಮುಂದೆ ಇಂತೇ ಇಹುದು, ನೀನೆ ಬಾಳಿನ ಹಸದ,
ಎನುತ, ಆ ಅರೆಗಳಿಗೆ ಒಲವ ಹೂ ಮುಡಿದಿದ್ದೆ !
ಸ್ವಪ್ನ ನಾಚುತ ಹಗಲೊಳವಿತಂತೆ, ನೀನೋಡಿ
ಸಾವಿನಲಿ ಮರೆಯಾದೆ ! ನಿನ್ನ ರೂಪದಲಾನು
ಯುಗ ಯುಗಗಳೇಕಾಂತ ಮನಕೆ ಮಾಡಿದ ಮೋಡಿ
ಬೆಳಕನರಕವ ಹೊಯ್ದು, ನನ್ನ ಜೀವವೆ ನೀನು
ಎಂದಿದ್ದೆ – ನನ್ನ ಉಷೆ – ಬಿಸಿಲುಗೋಲಿನ ಹಾಗೆ
ಅರ್ಧ ಕ್ಷಣ ನೀನಾದೆ! ಕತ್ತಲೇ ಉಳಿದ ಬಗೆ?
*****
Related Post
ಸಣ್ಣ ಕತೆ
-
ರಣಹದ್ದುಗಳು
ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
-
ಅಜ್ಜಿ-ಮೊಮ್ಮಗ
ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…
-
ಮನೆಮನೆಯ ಸಮಾಚಾರ
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…