ಮದುವೆಯಾಯಿತು ಉಷೆಗೆ ಮಸಣ ಮಂಟಪದಲ್ಲಿ.
ಕೇಳಲಿಲ್ಲವೆ ಊರು, ಜನರದರ ವೈಖರಿಯ?
ವರನ ಬಳಗವು ಬಂದು ನಿಂತಿತ್ತು, ಅಲ್ಲಲ್ಲಿ
ಹೆಜ್ಜೆ ಹೆಜ್ಜೆಗು ವಧುಗೆ ಕಾಲ ಕೂಡಿಟ್ಟುರೆಯ
ಮೂಳೆಯಾಭರಣಗಳ ಬಳುವಳಿಯ ನೀಡುತ್ತ!
ವಧುವಿನದು ಮೃದುಪಾದ ನೊಂದರಾಗದು ಎನುತ
ನಾಲ್ವರಾಕೆಯು ಕುಳಿತ ಪಾಲಕಿಯನೆತ್ತುತ್ತ
ಮಂಟಪಕೆ ತಂದರದ, ದಿಬ್ಬಣಕೆ ಸಂಗೀತ
ವರನ ಬಳಗದ ನಾಯಿ ನರಿಗಳದು. ರಣಹದ್ದು
ವಹಿಸಿ ಪೌರೋಹಿತ್ಯ, ಅರ್ಪಿಸಿತು ಆಕೆಯನು
ಅಗ್ನಿಯುಡಿಯಲಿ, ಒಡನೆ ಜ್ವಾಲೆ ಬಾಹುಗಳೆದ್ದು
ಉಷೆಯನಾಲಂಗಿಸುತ ಚಪ್ಪರಿಸಿ ಕೇಕೆಯನು
ಹಾಕುತಿರೆ- ಮೋಡಗಳು ಸ್ತಬ್ಧ ಮೌನದಿ ನಿಂತು
ನೋಡಿದುವು. ಸಿಡಿದಿತ್ತು ಜೀವನದ ಕೊನೆ ತಂತು!
*****
Related Post
ಸಣ್ಣ ಕತೆ
-
ಮಿಂಚಿನ ದೀಪ
ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…
-
ಏಕಾಂತದ ಆಲಾಪ
ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…
-
ಎರಡು…. ದೃಷ್ಟಿ!
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
-
ಕೂನನ ಮಗಳು ಕೆಂಚಿಯೂ….
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…
-
ಮೈಥಿಲೀ
"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…