ಮದುವೆಯಾಯಿತು ಉಷೆಗೆ ಮಸಣ ಮಂಟಪದಲ್ಲಿ.
ಕೇಳಲಿಲ್ಲವೆ ಊರು, ಜನರದರ ವೈಖರಿಯ?
ವರನ ಬಳಗವು ಬಂದು ನಿಂತಿತ್ತು, ಅಲ್ಲಲ್ಲಿ
ಹೆಜ್ಜೆ ಹೆಜ್ಜೆಗು ವಧುಗೆ ಕಾಲ ಕೂಡಿಟ್ಟುರೆಯ
ಮೂಳೆಯಾಭರಣಗಳ ಬಳುವಳಿಯ ನೀಡುತ್ತ!
ವಧುವಿನದು ಮೃದುಪಾದ ನೊಂದರಾಗದು ಎನುತ
ನಾಲ್ವರಾಕೆಯು ಕುಳಿತ ಪಾಲಕಿಯನೆತ್ತುತ್ತ
ಮಂಟಪಕೆ ತಂದರದ, ದಿಬ್ಬಣಕೆ ಸಂಗೀತ
ವರನ ಬಳಗದ ನಾಯಿ ನರಿಗಳದು. ರಣಹದ್ದು
ವಹಿಸಿ ಪೌರೋಹಿತ್ಯ, ಅರ್ಪಿಸಿತು ಆಕೆಯನು
ಅಗ್ನಿಯುಡಿಯಲಿ, ಒಡನೆ ಜ್ವಾಲೆ ಬಾಹುಗಳೆದ್ದು
ಉಷೆಯನಾಲಂಗಿಸುತ ಚಪ್ಪರಿಸಿ ಕೇಕೆಯನು
ಹಾಕುತಿರೆ- ಮೋಡಗಳು ಸ್ತಬ್ಧ ಮೌನದಿ ನಿಂತು
ನೋಡಿದುವು. ಸಿಡಿದಿತ್ತು ಜೀವನದ ಕೊನೆ ತಂತು!
*****
Related Post
ಸಣ್ಣ ಕತೆ
-
ಜಡ
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…
-
ಟೋಪಿ ಮಾರುತಿ
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…
-
ಗಂಗೆ ಅಳೆದ ಗಂಗಮ್ಮ
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…