ಮದುವೆಯಾಯಿತು ಉಷೆಗೆ

ಮದುವೆಯಾಯಿತು ಉಷೆಗೆ ಮಸಣ ಮಂಟಪದಲ್ಲಿ.
ಕೇಳಲಿಲ್ಲವೆ ಊರು, ಜನರದರ ವೈಖರಿಯ?
ವರನ ಬಳಗವು ಬಂದು ನಿಂತಿತ್ತು, ಅಲ್ಲಲ್ಲಿ
ಹೆಜ್ಜೆ ಹೆಜ್ಜೆಗು ವಧುಗೆ ಕಾಲ ಕೂಡಿಟ್ಟುರೆಯ
ಮೂಳೆಯಾಭರಣಗಳ ಬಳುವಳಿಯ ನೀಡುತ್ತ!
ವಧುವಿನದು ಮೃದುಪಾದ ನೊಂದರಾಗದು ಎನುತ
ನಾಲ್ವರಾಕೆಯು ಕುಳಿತ ಪಾಲಕಿಯನೆತ್ತುತ್ತ
ಮಂಟಪಕೆ ತಂದರದ, ದಿಬ್ಬಣಕೆ ಸಂಗೀತ
ವರನ ಬಳಗದ ನಾಯಿ ನರಿಗಳದು. ರಣಹದ್ದು
ವಹಿಸಿ ಪೌರೋಹಿತ್ಯ, ಅರ್ಪಿಸಿತು ಆಕೆಯನು
ಅಗ್ನಿಯುಡಿಯಲಿ, ಒಡನೆ ಜ್ವಾಲೆ ಬಾಹುಗಳೆದ್ದು
ಉಷೆಯನಾಲಂಗಿಸುತ ಚಪ್ಪರಿಸಿ ಕೇಕೆಯನು
ಹಾಕುತಿರೆ- ಮೋಡಗಳು ಸ್ತಬ್ಧ ಮೌನದಿ ನಿಂತು
ನೋಡಿದುವು. ಸಿಡಿದಿತ್ತು ಜೀವನದ ಕೊನೆ ತಂತು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಂಟಿನ ಕೊನೆಯ ಬಲ್ಲವರಾರು?
Next post ರೂಪಾಂತರ

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

cheap jordans|wholesale air max|wholesale jordans|wholesale jewelry|wholesale jerseys