ಹಗಲಿದೊ ಮುಗಿಯುತ ಬಂತು

ಸಂಧ್ಯಾ ರಾಣಿಯು ಸುಂದರ ಸ್ವಾಗತ
ನೀಡಿರಲದ ಕೈಕೊಳ್ಳಲು ಸರಿಯುತ
ಉರಿಗಣ್ಣಿನ ರವಿ ಪಶ್ಚಿಮವರಸುತ
ಕಾತರದಾತುರದಲಿ ಮುನ್ನಡೆದಿರೆ
ಹಗಲಿದೊ ಮುಗಿಯುತ ಬಂತು!

ಮನೆಯಲಿ ಮಡದಿಯು ಕಾದಿಹ ಕಾತರ
ತೊದಲು ಕಂದರಾಲಿಂಗನದಾತುರ
ಜನರೆದೆ ತುಂಬಿರೆ ದಾರಿಯ ಸರಸರ
ತುಳಿದಿವೆ ಕಾಲುಗಳವಸರದಿಂದಲಿ
ಹಗಲಿದೊ ಮುಗಿಯುತ ಬಂತು!

ಹಗಲೆಲ್ಲವು ಎದೆರಕ್ತವ ಬಸಿದಿಹ
ಬಾಳಿಗೆ ದುಡಿವವ, ಅದೋ ನಡೆಯುತಲಿಹ
ಒಲವಿನ ಬಿಸಿಯೂಟವ ಕನವರಿಸಿಹ
ಕಾಲಿನ ಚಟಪಟ ವೇಗವೇರುತಿದೆ
ಹಗಲಿದೊ ಮುಗಿಯುತ ಬಂತು!

ಜಗ ಜವದಲಿ ನಡೆದಿದೆ ಮನೆಯೆಡೆ
ಕಂಡ ಕನಸು ನೀಡುವ ಒಲವಿನ ಎಡೆ
ಉಂಡು ನಿದ್ರಿಸುತೆ, ಸಂತಸವನು ಪಡೆ-
ವಾಸೆಯ ಸಿಡಿತದಿ ರಾಗವೇಗದಲಿ
ಹಗಲಿದೊ ಮುಗಿಯುತ ಬಂತು!

ಹೃದಯದ ನೋವಿದೋ ಕಾಲನಡಿಗೆಯನು
ತಡೆದಿದೆ, ಏತಕೆ ಸಾಗುವೆ ನೀನು ?
ನಿನ್ನುಷೆಯಿಲ್ಲದೊಡೆಂತಿರಲೇನು ?
ಇರುಳು ಮುತ್ತಿದರು, ನಡೆ, ಮೆಲ್ಲನೆ ನಡೆ
ಎನುತಿರೆ-
ಹಗಲಿದೊ ಮುಗಿಯುತ ಬಂತು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೂಬೂನ ಬಾಳು
Next post ಸ್ವಗತ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

cheap jordans|wholesale air max|wholesale jordans|wholesale jewelry|wholesale jerseys