ನೋಡು ಉಷೆ !

ನೋಡು ಉಷೆ! ಸುತ್ತೆಲ್ಲ ಬೆಡಗು ಸೂಸಿದೆ ತುಂಬಿ,
ಚಂದ್ರಮನ ಎಳಗಿರಣಗಳ ತೋಳತೆಕ್ಕೆಯಲಿ
ಮುದ್ದು ಮೋಡವು ನಕ್ಕು ನಲಿಯುತಿರೆ, ಮರಿದುಂಬಿ
ಹೂಹೃದಯದೊಲವಿನಲಿ ಕುಣಿದಾಡುವಂದದಲಿ!
ತಂಗಾಳಿ ಮರದೆಲೆಯ ಮುಟ್ಟಿಯೂ ಮುಟ್ಟದೊಲು,
ಮೃದುವಾಗಿ ಮುತ್ತಿಟ್ಟು, ಮುಂದೆ ಸಾಗುತ್ತಲಿದೆ.
ಆ ಗಿರಿಯ ಶಿಖರವನು ಬಾಚಿ ತಬ್ಬಿದ ಹೊನಲು
ಬೆಳ್ಳಿ ಬೆಳಕಿನ ಒಲವು ಪಿಸುನಗೆಯ ಬೀರುತಿದೆ!
ಎಲ್ಲೆಡೆಯು ಹಿರಿ ಬೆಡಗು, ಇಲ್ಲಿ ನೀ ಸುಖದ ಸಿರಿ!
ಹೃದಯ ಕಂಗಳಲಿರಿಸಿ, ಕಂಗಳನೆ ಮನೆಮಾಡಿ
ಅದರೊಳಿರು ಬಾರೆಂದು ಕರೆಯುತಿಹೆ ಮಿಂಚುಮರಿ!
ಈ ರಾತ್ರಿ ಪ್ರೇಮಿಗಳ ಮಿಲನದೊಲವಿನ ಮೋಡಿ
ಹಾಸುತಿದೆ; ಬಾ ಬಳಿಗೆ, ಇರ್ವರೊಂದಾಗೋಣ,
ನಾಳೆ ನಿನ್ನೆಗಳಳಲ ದೂರ ದೂರಿರಿಸೋಣ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರಾಚಿ ಕಾರಣೋರು
Next post ಅಮ್ಮ – ಬೆಂಕಿ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…