ಒಂದೆ ಒಲವು

ತೋಟದಲಿ ಬಳುಕುತಿಹ ಬಳ್ಳಿಯೊಳಗರಳುತಿಹ
ಎಳೆಮೊಗ್ಗುಗಳಿಂದ ಚಿವುಟಿ ಕೈಯಲಿ ಹಿಡಿದು
ಹಸುಗೂಸ ಹಾಲ್ಕೆನ್ನೆಯಂತೆ ಮಿದುವಾಗಿರುವ
ದನಗಳನು ಕೆನ್ನೆಗಳಿಗೊತ್ತಿಕೊಂಡೆ !

ಗಳಿಗೆಗಳು ಉರುಳಿದುವು. ಕಾವಿನಲಿ ಎಳೆಮೊಗ್ಗು
ಬಸವಳಿದು ಬಾಡುತಲಿ ನಿರ್ಜೀವ ತರಗಾಯ್ತು.
ಹೃದಯದೊಳ ಕೊರಗಿನಲಿ ಕಂಗಳಲಿ ಹನಿಯಿಳಿದು
ಬಾಡಿದರಳಿಗೆ ನೀರನೆರೆದೆನಾಗ!

ಕಂದನನು ಕಳೆದೊಲವ ತಾಯಿ ಹೆಣ್ಣಿನ ಹಾಗೆ
ಮಲ್ಲಿಗೆಯ ಬಳ್ಳಿಗಳು ಕುಗ್ಗಿ ತಲೆ ತಗ್ಗಿಸಲು
ಎಲೆಗಳೆಲ್ಲವು ಮೌನ! ಸುಳಿವಿಲ್ಲ ಗಾಳಿಯದು!
ಎಲೆಯೊಡೆದು ಸಿಡಿದಿತ್ತು ಮೊಗ್ಗಿಗಾಗಿ!

ಆಗೆನಗೆ ಅರಿವಾಯ್ತು ಬಾಳ ಬಾನಿನ ಹಿಂದೆ
ಅರಳಿರುವ ಹೂವಿನೆದೆ ! ಬಳ್ಳಿಯಲಿ ತಾಯಾಗಿ,
ಮೊಗ್ಗಿನಲಿ ಮಗುವಾಗಿ, ಎಲೆಗಳಲಿ ಕುಲವಾಗಿ,
ಎಲ್ಲವನು ಆಳುವುದು ಒಂದೆ ಒಲವು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರೋಪ – ೨
Next post ಸಮುದ್ರ ಗೀತೆ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

cheap jordans|wholesale air max|wholesale jordans|wholesale jewelry|wholesale jerseys