ನಾಲ್ಕು ದಿನಗಳ ಕಾಲ ಬೇರೆಯೂರಿಗೆ ಸಾಗಿ
ನಿನ್ನ ಕನಸನು ಮರೆತು ನನ್ನಂತೆ ನಾನಿದ್ದು
ಮತ್ತೆ ಹಿಂದಿರುಗುವೆನು, ಅಗಲಿಕೆಯ ದಿನಗಳಲ್ಲಿ
ಇನಿತಾದರೂ ನಿನ್ನ ನೆನಪುಗಳು ಭುಗಿಲೆದ್ದು
ಮನವ ಕೆರಳಿಸದಿರಲಿ, ವಿರಹ ಮಾಡಲಿ ನಿದ್ದೆ!
ಮೌನ ಮಸಣದಲೆನ್ನ ಮನದಳಲ ಮಣ್ಣಿಟ್ಟು,
ಬಾಳಿನುಷೆಯನು ಬಲಿಯಕೊಂಡ ಕ್ರೂರತೆ ಮುದ್ದೆ
ದೈವವನು ಮರೆಯುವೆನು, ನೆಲದಲ್ಲಿ ಹೂಳಿಟ್ಟು!
ಎಂದು ಚಿಂತಿಸುತಾನು ಸಾಗುತಿರಲಾ ಎಡೆಗೆ
ಸಂಜೆಯಾಗಸದಲ್ಲಿ ಒಂದೆ ತಾರಕೆಯರಳಿ,
ಮುಗಿಲ ಮೋಡದ ಹಣೆಗೆ ಬಾಸಿಂಗವಿಟ್ಟಂತೆ
ಹೊಳೆಯುತಿರೆ, ಹೃದಯದಲಿ ನಿನ್ನ ಕನಸೇ ಕೆರಳಿ
ಮನವನಳಲಿಸುತಿಹುದು. ಹೃದಯದೊಲವಿನ ಆಸೆ
ನಿಟ್ಟುಸಿರೊಳುಸುರುತಿದೆ- ಇನ್ನೆಲ್ಲಿ ಬಾಳಿನುಷೆ?
*****
Related Post
ಸಣ್ಣ ಕತೆ
-
ಕರಿ ನಾಗರಗಳು
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
-
ವಿಷಚಕ್ರ
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…