ಮಲಗು ಮಲಗೆನ್ನೆದೆಯ ಮಂಟಪದ ಮೂರ್ತಿ

ಮಲಗು ಮಲಗೆನ್ನೆದೆಯ ಮಂಟಪದ ಮೂರ್ತಿ
ಮುಗಿಲಿನಲಿ ಮೋಡಗಳು ಕೂಡುತಿವೆ ಭರದಿ!

ಜಗದ ಕೊನೆಯನು ತಂದ ದೂತರಂತೆ
ಪ್ರಳಯ ರುದ್ರನ ಅಂಶ ತಾಳ್ದರಂತೆ
ಗುಡುಗು ಸಿಡಿಲುಗಳೆರಗಿ ಜಗವ ನಡುಗಿಸುತಿಹವು.
ನೀನೇಳಬೇಡ, ಮಗು, ಉಷೆಯೆ ಮಲಗಿನ್ನು!

ನಾಳೆಯಂತೊ ಏನೊ ಎಂಬುದೇತಕೆ ಚಿಂತೆ?
ಬಾಳು ಎಂತೋ ಏಕೋ, ಬರಿಯ ಬಯಕೆಯ ಬೊಂತೆ!
ನಂದುತಿಹ ನನ್ನದೆಯ ನೋವ ನೀ ಕಾಣದಿರು
ಈಗೇಳಬೇಡ, ಮಗು, ಉಷೆಯೆ ಮಲಗಿನ್ನು?

ಹೊಂಗನಸುಗಳು ಬಂದು ನಿನ್ನ ಮುತ್ತಿಡುತಿರಲಿ,
ಆ ಮುತ್ತುಗಳೆನ್ನ ಮುತ್ತು ಮಾಸದೆ ಇರಲಿ.
ಈ ಜಗದ ಕೊರತೆಯ ನನಸದನು ತಾಗದೊಲು
ಏಳದಿರು ಮುದ್ದು ಮಗು, ಉಷೆಯೆ ಮಲಗಿನ್ನು!

ನಾನಿನ್ನ ಜಗದೊಳಗೆ ಮುಂದೊಮ್ಮೆ ಬಂದಾಗ
ನಿನ್ನೊಲವ ಬೆಳಕ ರವಿ ಹೃದಯದಲಿ ಸುಳಿದಾಗ
ನೀನೇಳು ನನ್ನ ಮಣಿ, ಎದೆಯ ಹಗಲಿನ ರಾಗ,
ಆಗ ಕಣ್ತೆರೆ, ಈಗ ಉಷೆಯೆ, ಮಲಗಿನ್ನು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರೋಪ – ೫
Next post ಹಾಯ್ಕಗಳು

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

cheap jordans|wholesale air max|wholesale jordans|wholesale jewelry|wholesale jerseys