ಹೃದಯ ಒಲವಿಗೆ ಅಲ್ಲದಿನ್ನೇತಕೆ?

ಹೃದಯ ಒಲವಿಗೆ ಅಲ್ಲದಿನ್ನೇತಕೆ?
ಬಾನಿನಲಿ ತಾರೆಗಳ ಮಾಲೆಯೇಕೆ?

ಆ ಮೂರು ಮೋಡಗಳ ನಡುವೆ ಚೆಂಡಿನಹಾಗೆ
ಕೇಸರಿಯ ಕಿರಣಗಳ ಮಂಜಮೇಲೆ
ಹರಹುತ್ತ ಏರುತಿಹ ಚಂದಿರನ ಬೆಳ್ಳಿಯಲಿ
ನೀ ಬಾರದಿರೆ ನನ್ನ ಹಾಡಿದೇಕೆ?

ಓ ನನ್ನ ಉಷೆ, ನಿನ್ನ ‘ಓ’ ದನಿಯೆ ಕೇಳದಿದೆ,
ಎನಿತೆನಿತು ಕೂಗಿದರು ಬಾರೆಯೇಕೆ?
ನನ್ನ ನಿನ್ನೊಲವಿಂದ ಒಂದೆ ಬಾಳಿನ ಚಂದ
ಜಗಕೆ ತೋರುವ ಎನಲು, ಮುನಿವುದೇಕೆ?

ಮೋಡಗಳ ಮೈಯಿಳಿದು, ಮಳೆಯಿಳಿದು, ಮುಗಿದಾಗ,
ಹೂಗಿರಣ ಅರಳುವುದು ಜಗದೊಳೇಕೆ?
ಎಲೆಯ ಕುಣಿತದ ತಾಳ, ಮಂಜು ಹನಿಗಳ ಮೇಳ,
ಗಾಳಿಯಿಂಪಿನ ಗೀತ ಸುಳಿವುದೇಕೆ?

ಜೀವನದ ನಗೆ ನೀನು, ನಗೆಯೊಳನಗೆ ನೀನು,
ನೀ ಬಾರದಿರೆ ಎಲ್ಲ ನಗೆಯಿದೇಕೆ?
ಕಲ್ಪನೆಯ ಬಿಸಿಯಲ್ಲಿ ಸುಳಿದೊಂದು ಕನಸಂತೆ
ನೀ ತೋರದಿರೆ ನನ್ನ ಬಾಳಿದೇಕೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರೋಪ – ೭
Next post ಯುದ್ಧ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…