Home / ಕವನ / ಕವಿತೆ / ಜೀವನದ ರೂಪನ್ನೆ ಬದಲಿಸುವ, ಬಾ!

ಜೀವನದ ರೂಪನ್ನೆ ಬದಲಿಸುವ, ಬಾ!

ಕೈಯ ಕೈಯಲಿ ಇಟ್ಟು
ಕಣ್ಣ ಕಣ್ಣಲಿ ನಟ್ಟು
ಮುಂದಕ್ಕೆ ಸಾಗೋಣ, ನೋಡೋಣ ಬಾ;
ನಾನು ನೀನೂ ಕೂಡಿ
ವಿಧಿಯೊಡನೆ ಹೆಣಗಾಡಿ
ಜೀವನದ ರೂಪನ್ನೆ ಬದಲಿಸುವ, ಬಾ!

ನದಿಯ ತಣ್ದುಟಿ ಮೇಲೆ
ಶಶಿಯ ಒಲವಿನ ಓಲೆ
ಕೊರೆಸಿ ಕುಣಿವುದನು ಓದೋಣ ಬಾ;
ಬಾಳಿನಂಗಳದಲ್ಲಿ
ಸಾವ ಪಂಜರದಲ್ಲಿ
ಅಳಿದುಳಿದ ಕುಲವನ್ನು ಕಾಣೋಣ, ಬಾ!

ನಾಡ ಸುತ್ತಲು ಸುತ್ತಿ
ಹಾಡ ಮಿಂಚಿನ ಕತ್ತಿ
ಝಳಪಿಸುತ ಇರುಳನ್ನು ಇರಿಯೋಣ ಬಾ;
ನಾನು ನೀನೂ ಕೂಡಿ
ಜೀವನವ ಜಾಲಾಡಿ
ಹುದುಗಿರುವ ಮುತ್ತನ್ನು ಆಯೋಣ, ಬಾ!

ಸಿರಿಯ ಸಂತಸ ಕೂಟ,
ಹೊರೆಯ ಸಿಂಗರ ಮಾಟ,
ಮರೆಯ ಹೆಣ್ಣಿನ ಬೇಟ, ಕಾಣೋಣ ಬಾ;
ಅದಕೆ ಜೀವವ ತೆತ್ತ
ಲೆಕ್ಕವಿಲ್ಲದ ಮೊತ್ತ
ಜನರ ಜೀವನವನ್ನು ಎಣಿಸೋಣ, ಬಾ!

ನಾಡ ಬಿಡುಗಡೆಗಾಗಿ
ಓಡ ಅರಳುಗಳಾಗಿ
ಬಾಡಿರುವ ಹೂಗಳನು ಆಯೋಣ ಬಾ;
ಅವರ ಜೀವನದ ನಾಡಿ
ಸಿಡಿಲ ನದಿಗಳ ಕೋಡಿ
ಕೊಚ್ಚಿಸುತ, ಕ್ರಾಂತಿಯನು ಹರಡೋಣ, ಬಾ!

ಜಗವೆ ತನ್ನದು ಎಂದು,
ಕದ್ದು ಎಲ್ಲವ ತಂದು
ಕೂಡಿಟ್ಟ ಕಳ್ಳನನು ಅಳಿಸೋಣ ಬಾ;
ತನ್ನ ಬಾಳ್ವೆಯ ತೆತ್ತು,
ತಾನೆ ಉಳಿದರ ತೊತ್ತು
ಆಗಿ ಅಳಿಯುವ ಜೀವ ಉಳಿಸೋಣ, ಬಾ!

ಅವರ ಕೊನೆಯಿದು ಅಲ್ಲ,
ಇದು ಬರಿಯ ಉರಿಯಲ್ಲ,
ನಾಡಿನೆದೆಗಿಚ್ಚೆಂದು ಅರಿಯೋಣ ಬಾ;
ನಾನು ನೀನೂ ಕೂಡಿ
ಒಲವ ಹಾಡನು ಹಾಡಿ
ಜೀವನದ ರೂಪ, ಬದಲಿಸುವ ಬಾ!
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್