ಜೀವನದ ರೂಪನ್ನೆ ಬದಲಿಸುವ, ಬಾ!

ಕೈಯ ಕೈಯಲಿ ಇಟ್ಟು
ಕಣ್ಣ ಕಣ್ಣಲಿ ನಟ್ಟು
ಮುಂದಕ್ಕೆ ಸಾಗೋಣ, ನೋಡೋಣ ಬಾ;
ನಾನು ನೀನೂ ಕೂಡಿ
ವಿಧಿಯೊಡನೆ ಹೆಣಗಾಡಿ
ಜೀವನದ ರೂಪನ್ನೆ ಬದಲಿಸುವ, ಬಾ!

ನದಿಯ ತಣ್ದುಟಿ ಮೇಲೆ
ಶಶಿಯ ಒಲವಿನ ಓಲೆ
ಕೊರೆಸಿ ಕುಣಿವುದನು ಓದೋಣ ಬಾ;
ಬಾಳಿನಂಗಳದಲ್ಲಿ
ಸಾವ ಪಂಜರದಲ್ಲಿ
ಅಳಿದುಳಿದ ಕುಲವನ್ನು ಕಾಣೋಣ, ಬಾ!

ನಾಡ ಸುತ್ತಲು ಸುತ್ತಿ
ಹಾಡ ಮಿಂಚಿನ ಕತ್ತಿ
ಝಳಪಿಸುತ ಇರುಳನ್ನು ಇರಿಯೋಣ ಬಾ;
ನಾನು ನೀನೂ ಕೂಡಿ
ಜೀವನವ ಜಾಲಾಡಿ
ಹುದುಗಿರುವ ಮುತ್ತನ್ನು ಆಯೋಣ, ಬಾ!

ಸಿರಿಯ ಸಂತಸ ಕೂಟ,
ಹೊರೆಯ ಸಿಂಗರ ಮಾಟ,
ಮರೆಯ ಹೆಣ್ಣಿನ ಬೇಟ, ಕಾಣೋಣ ಬಾ;
ಅದಕೆ ಜೀವವ ತೆತ್ತ
ಲೆಕ್ಕವಿಲ್ಲದ ಮೊತ್ತ
ಜನರ ಜೀವನವನ್ನು ಎಣಿಸೋಣ, ಬಾ!

ನಾಡ ಬಿಡುಗಡೆಗಾಗಿ
ಓಡ ಅರಳುಗಳಾಗಿ
ಬಾಡಿರುವ ಹೂಗಳನು ಆಯೋಣ ಬಾ;
ಅವರ ಜೀವನದ ನಾಡಿ
ಸಿಡಿಲ ನದಿಗಳ ಕೋಡಿ
ಕೊಚ್ಚಿಸುತ, ಕ್ರಾಂತಿಯನು ಹರಡೋಣ, ಬಾ!

ಜಗವೆ ತನ್ನದು ಎಂದು,
ಕದ್ದು ಎಲ್ಲವ ತಂದು
ಕೂಡಿಟ್ಟ ಕಳ್ಳನನು ಅಳಿಸೋಣ ಬಾ;
ತನ್ನ ಬಾಳ್ವೆಯ ತೆತ್ತು,
ತಾನೆ ಉಳಿದರ ತೊತ್ತು
ಆಗಿ ಅಳಿಯುವ ಜೀವ ಉಳಿಸೋಣ, ಬಾ!

ಅವರ ಕೊನೆಯಿದು ಅಲ್ಲ,
ಇದು ಬರಿಯ ಉರಿಯಲ್ಲ,
ನಾಡಿನೆದೆಗಿಚ್ಚೆಂದು ಅರಿಯೋಣ ಬಾ;
ನಾನು ನೀನೂ ಕೂಡಿ
ಒಲವ ಹಾಡನು ಹಾಡಿ
ಜೀವನದ ರೂಪ, ಬದಲಿಸುವ ಬಾ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರೋಪ – ೧೦
Next post ಅಲ್ಲಮ

ಸಣ್ಣ ಕತೆ

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…