Home / ಕವನ / ಕವಿತೆ / ಜೀವನದ ರೂಪನ್ನೆ ಬದಲಿಸುವ, ಬಾ!

ಜೀವನದ ರೂಪನ್ನೆ ಬದಲಿಸುವ, ಬಾ!

ಕೈಯ ಕೈಯಲಿ ಇಟ್ಟು
ಕಣ್ಣ ಕಣ್ಣಲಿ ನಟ್ಟು
ಮುಂದಕ್ಕೆ ಸಾಗೋಣ, ನೋಡೋಣ ಬಾ;
ನಾನು ನೀನೂ ಕೂಡಿ
ವಿಧಿಯೊಡನೆ ಹೆಣಗಾಡಿ
ಜೀವನದ ರೂಪನ್ನೆ ಬದಲಿಸುವ, ಬಾ!

ನದಿಯ ತಣ್ದುಟಿ ಮೇಲೆ
ಶಶಿಯ ಒಲವಿನ ಓಲೆ
ಕೊರೆಸಿ ಕುಣಿವುದನು ಓದೋಣ ಬಾ;
ಬಾಳಿನಂಗಳದಲ್ಲಿ
ಸಾವ ಪಂಜರದಲ್ಲಿ
ಅಳಿದುಳಿದ ಕುಲವನ್ನು ಕಾಣೋಣ, ಬಾ!

ನಾಡ ಸುತ್ತಲು ಸುತ್ತಿ
ಹಾಡ ಮಿಂಚಿನ ಕತ್ತಿ
ಝಳಪಿಸುತ ಇರುಳನ್ನು ಇರಿಯೋಣ ಬಾ;
ನಾನು ನೀನೂ ಕೂಡಿ
ಜೀವನವ ಜಾಲಾಡಿ
ಹುದುಗಿರುವ ಮುತ್ತನ್ನು ಆಯೋಣ, ಬಾ!

ಸಿರಿಯ ಸಂತಸ ಕೂಟ,
ಹೊರೆಯ ಸಿಂಗರ ಮಾಟ,
ಮರೆಯ ಹೆಣ್ಣಿನ ಬೇಟ, ಕಾಣೋಣ ಬಾ;
ಅದಕೆ ಜೀವವ ತೆತ್ತ
ಲೆಕ್ಕವಿಲ್ಲದ ಮೊತ್ತ
ಜನರ ಜೀವನವನ್ನು ಎಣಿಸೋಣ, ಬಾ!

ನಾಡ ಬಿಡುಗಡೆಗಾಗಿ
ಓಡ ಅರಳುಗಳಾಗಿ
ಬಾಡಿರುವ ಹೂಗಳನು ಆಯೋಣ ಬಾ;
ಅವರ ಜೀವನದ ನಾಡಿ
ಸಿಡಿಲ ನದಿಗಳ ಕೋಡಿ
ಕೊಚ್ಚಿಸುತ, ಕ್ರಾಂತಿಯನು ಹರಡೋಣ, ಬಾ!

ಜಗವೆ ತನ್ನದು ಎಂದು,
ಕದ್ದು ಎಲ್ಲವ ತಂದು
ಕೂಡಿಟ್ಟ ಕಳ್ಳನನು ಅಳಿಸೋಣ ಬಾ;
ತನ್ನ ಬಾಳ್ವೆಯ ತೆತ್ತು,
ತಾನೆ ಉಳಿದರ ತೊತ್ತು
ಆಗಿ ಅಳಿಯುವ ಜೀವ ಉಳಿಸೋಣ, ಬಾ!

ಅವರ ಕೊನೆಯಿದು ಅಲ್ಲ,
ಇದು ಬರಿಯ ಉರಿಯಲ್ಲ,
ನಾಡಿನೆದೆಗಿಚ್ಚೆಂದು ಅರಿಯೋಣ ಬಾ;
ನಾನು ನೀನೂ ಕೂಡಿ
ಒಲವ ಹಾಡನು ಹಾಡಿ
ಜೀವನದ ರೂಪ, ಬದಲಿಸುವ ಬಾ!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...