ಸ್ವರ್ಗದಲಿ ದೇವ ನಗುತಿಹನೇನು?

ಯಾರ ನುಡಿಗಳ ಸೋಂಕು ಸುಳಿದೊಡನೆಯೇ ಮನದ
ಮೈದಾನದಲಿ ಬಾಳ ಋತು ವಸಂತದ ಸುಗ್ಗಿ
ಎಳೆಯಾಸೆಗಳ ಚಿಗುರ ತಂದು, ಒಲವಿನ ಹಸದ
ಇದೊ ಎಂದು ಪಿಸುಗುಡಲು, ಜೀವನವು ಹಿರಿ ಹಿಗ್ಗಿ
ನಲಿದಿತೋ, ಆಕೆ ಬರುವಳು ಇಂದು ! ಮತ್ತೊಮ್ಮೆ
ನಕ್ಕು ನಗೆಯಾಡಿಸುವೆ ! ನಾಚುತಲಿ ಕೆಂಪಾಗಿ.
ನಿರ್ಮಲತೆ ಕಂಗಳಲಿ ನಲುಮೆ ಬೀರುತಲೊಮ್ಮೆ
ಅಂದಿನೋಲು, ಕೊಂಕಿನಲಿ, ಒಂದು ಚಣ ತಲೆಬಾಗಿ,
ಮತ್ತೆ ಎದೆಯೆಡೆ ಸುಳಿದು, ನಗುವ ಸೂಸುತ ಬೀಗಿ,
ಕುಣಿಯುವಳು ಎಂದಿದ್ದೆ!

ಮುಂ ಬಂದು ಕಂಡೆನದ!
ಜೀವನದ ವಿಷದೊಡಲ ಸರ್ಪಗಳ ಉರಿ ತಾಗಿ,
ಸಾವಿನೆಡೆ ದಿಬ್ಬಣವ ಬೆಳಸಿರುವ ಎಳತನದ
ಉಷೆಯ ನನ್ನುಷೆಯನ್ನು ! ಒಲವಿಗಿದೆ ಕೊನೆಯೇನು ?
ಆದರೂ ಸ್ವರ್ಗದಲಿ ದೇವ ನಗುತಿಹನೇನು ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರೋಪ – ೧೪
Next post ಪಹರೆ

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

cheap jordans|wholesale air max|wholesale jordans|wholesale jewelry|wholesale jerseys