ಎದೆ ತಂತಿ ಮಿಡಿದಾಗ

ಎದೆ ತಂತಿ ಮಿಡಿದಾಗ ಸಿಡಿದ ತಾರಕೆಗಳನು
ಮಾಲೆಯಾಗಳವಡಿಸಿ, ಉಷೆಯ ಚೆಂಗೊರಳಿನಲಿ
ಹಾರವಾಗಿಡುವಾಸೆ ಮನವ ತುಂಬಿರಲಾನು
ಹಿಗ್ಗಿನಲಿ ಕೂಡಿಸಿದೆ ಅವನೆಲ್ಲ. ಇರುಳಿನಲಿ
ಬಚ್ಚಿಟ್ಟು, ಕಾಣದಿದ್ದಾ ಪೋರ, ರವಿಯೆದ್ದು,
ಕಿಚ್ಚಿನಲಿ ಅವುಗಳನು ನೂಕಿದನು. ಅವು ಓಡಿ
ಬಿರಿದ ತಾವರೆಯೆದೆಯ ಮೃದುತೆಯುಡಿಯಲಿ ಬಿದ್ದು
ನಿಂದಿಹುವು ಹನಿಯಾಗಿ, ನಗುತಿಹುದು ಜಗ ನೋಡಿ!

ಬಾಳಿನುಷೆ, ತಾರೆಗಳ ಕಾಣುವಾಸೆಯನುಳಿದು,
ಅವುಗಳೆದೆ ಸತ್ವವೀ ಮಂಜು ಹನಿಗಳ ಮುತ್ತು.
ಮಾಲೆಯನು ಕಂಡು, ನೀನೊಪ್ಪದೆಯೆ ಕಡು ಮುಳಿದು,
ತಾವರೆಯ ಕೀಳದಿರು. ಬಂದಂತೆ ಇಳಿಹೊತ್ತು,
ಈ ಮಂಜು ಮುಗಿಲಿನಲಿ ತಾರೆಯಾಗರಳುವುದು
ಎಂದು ಒಲವನು ನೀಡು, ಎದೆಯುಳಿವಿಗದೆ ಹಿರಿದು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರೋಪ – ೧೬
Next post ಚಲನೆ

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…