ಭತ್ತದ ಕಣಜದೊಳಗೆ ನುಸಿ
ಈಜಾಡಿ ತಿಂದು ತೇಗಿ ಸಿಪ್ಪೆ ಬೀಸಾಡಿದಂತೆ
ಸೋಮು,
ನೀನೂ ಅಕ್ಷರದ ಕಣಜದೊಳಗೆ ಈಜಾಡು
ಬಿಡದೇ ಅಕ್ಷರ ಅಕ್ಷರ ತಿನ್ನು
ತೇಗಾಡುವಷ್ಟು ಓದು ಅರಗಿಸಿಕೋ
ಹೊಸ ಹೊಸ ಆಯಾಮಗಳ, ಸಮನ್ವಯಗಳ
ಸಂವೇದನೆಗೆ ಸ್ಪಂದಿಸು,
ಕಾಲಡಿಯಲ್ಲಿಯೇ ವಿಜ್ಞಾನ ತಂತ್ರಜ್ಞಾನಗಳ
ಸಂವೇದನೆಗಳಿಗೆ ಮಿತಿ ಇಲ್ಲ
ಕೊರಡು ಕೊನರುವದು
ಕಲ್ಲು ಕವಿತೆ ಹಾಡುವುದು
ಮುಳ್ಳು ಹೂವಾಗಿ ಅರಳುವುದು
ಭಾವನೆಗೆ ಬೇಲಿ ಬೇಡ
ನದಿಗೆ ಒಡ್ಡು ಬೇಡ
ಆಕಾಶಕ್ಕೆ ಏಣಿ ಬೇಡ
ಸಮುದ್ರಕ್ಕೆ ಸೇತುವೆ ಬೇಡವೇ ಬೇಡ.
(ಸಾಕ್ಷರತಾ ಕವನ)
*****
Related Post
ಸಣ್ಣ ಕತೆ
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
-
ಗೋಪಿ
ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…
-
ಅಮ್ಮ
‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…
-
ಮೇಷ್ಟ್ರು ವೆಂಕಟಸುಬ್ಬಯ್ಯ
ಪ್ರಕರಣ ೧೨ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ್ದಾಯಿತು. ತಿಮ್ಮರಾಯಪ್ಪ ಹೇಳಿ ಕೊಟ್ಟಿದ್ದ ಹಾಗೆ ಕಲ್ಲೇಗೌಡರಿಗೆ ಕಾಗದಗಳನ್ನು ಬರೆದದ್ದೂ ಆಯಿತು. ಕಡೆಗೆ ರಿಜಿಸ್ಟರ್ಡ್ ಕಾಗದವನ್ನೂ ಅದಕ್ಕೆ ಒಂದು ಜ್ಞಾಪಕದೋಲೆಯನ್ನೂ ಕಳಿಸಿದ್ದಾಯಿತು.… Read more…
-
ಮಂಜುಳ ಗಾನ
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…