Home / ಕವನ / ಕವಿತೆ / ಕಳೆದು ಹೋದೆಯಲ್ಲೇ

ಕಳೆದು ಹೋದೆಯಲ್ಲೇ

ಲಕ್ಷ್ಮೀಽ ಕಳೆದುಹೋದೆಯಲ್ಲೆ Megesticನಲ್ಲಿ
ಲಕ್ಷ್ಮೀ ಕಳೆದುಹೋದೆಯಲ್ಲೆ ಮ್ಯಾಜೆಸ್ಟಿಕ್‌ನಲ್ಲಿ
ಮೊನ್ನೆ ಮೊನ್ನೆಯಷ್ಟೇ ಅದೇ ದೀಪಾವಳಿಯಂದು
ಗರಿಗರಿಯಾದ ಸೀರೆಯುಟ್ಟು
ನನ್ನ ಮನೆಗೆ ಬಂದಿದ್ದೆಯಲ್ಲೆ
ಲಕ್ಷ್ಮೀ ಕಳೆದು ಹೋದೆಯೆಲ್ಲೆ…

ಮೊನ್ನೆ ರಾಜ್ಯೋತ್ಸವದಂದು ನಿನಗೂ
ಭುವನೇಶ್ವರಿಗೂ ಒಂದೇ sweet ಮಾಡಿದ್ದೆ
ಅದಕ್ಕೇನಾದರೂ ಸಿಟ್ಟುಮಾಡಿಕೊಂಡೆಯೋ!
ಕಳ್ಳರ ಕಾಟ ಜಾಸ್ತಿ ಎಂದು ಒಂದೆಳೆ
ಸರದ ಮೇಲೆಯೇ ನಿನ್ನ ಪೂಜಿಸಿದ್ದೆ
ಅದಕ್ಕೇನಾದರೂ ಬೇಸರ ಪಟ್ಟುಕೊಂಡೆಯೋ!
ಎಲ್ಲವೂ ನಿನ್ನದೇ ಅಂದೆ
ಸ್ವಲ್ಪ ನಿರ್ಲಕ್ಷಿಸಿದ್ದೇನೋ ನಿಜ
ಆದರೆ ಇಂದು ಒಮ್ಮಿಂದೊಮ್ಮೆಲೆ
ನನ್ನ ಮರೆತು Megesticನಲ್ಲಿ ಇಳಿದು ಬಿಡುವುದೇ
ಲಕ್ಷ್ಮೀ ಕಳೆದುಹೋದೆಯಲ್ಲೆ…..

ನೀನು ಅದೆಷ್ಟು ಚೆಂದ ಅಂದ ಆಕರ್ಷನೀಯಳು
ಆಘಾತವಾಗದಂತೆ ಕಾಯುತ್ತಲೇ ಇದ್ದೆ
ನೀನು ಹೀಽಗೆ ತುಂಬಾ ಚಂಚಲಿ
ನೀನು ನಿನ್ನ ಹಾಗೆಯೇ,
ನಿನ್ನ ಕಳೆದುಕೊಂಡ ನನ್ನ ಮನ ಮೌನವಾಯಿತು
ಬೆವರು ಬೆನ್ನಕಾವಲಿಗೆ ಇಳಿಯಿತು
ಗೊತ್ತಾಗಲೇ ಇಲ್ಲ ನೋಡು ನನಗೆ ನೀನು
ಇದ್ದಕ್ಕಿದ್ದ ಹಾಗೆ ಒಮ್ಮೆಲೇ ತಪ್ಪಿಸಿಕೊಳ್ಳುವಿಯೆಂದು
ಒಂದಿಷ್ಟೇನಾದರೂ ಸಂಶಯ ಬಂದಿದ್ದರೆ
ಕೈಯಲ್ಲಿ ಕೈ ಹಿಡಿದು ನಡೆಯುತ್ತಿದ್ದೆ
ಲಕ್ಷ್ಮೀ ಕಳೆದುಹೋದೆಯಲ್ಲೆ….
ಪ್ರವಾಸಿಗರೇ ತುಂಬಿದ Megesticನಲ್ಲಿ
ಕಳ್ಳರ ಹಾವಳಿಗೆ ತುತ್ತಾಗಿ ದಿನ ದಿನವೂ
ಮೌಲ್ಯವೇ ಕಳೆದುಕೊಳ್ಳುತ್ತಿರುವೆಯಲ್ಲೆ….
ಹಾಯಾಗಿ ಬದುಕಲೂ ಬಿಡದ ಬೆಂಗಳೂರಿನಲ್ಲಿ
ನೀನು ಬದುಕುತ್ತಲೇ ಕಳೆದುಕೊಳ್ಳುತ್ತಿದ್ದಿಯಲ್ಲ
ಬಡವರ ಕನಸಿಗೆ ಕೊಳ್ಳಿ ಇಡುತ್ತಾ
ಸಿರಿಗರವ ಹೊಡೆದವರಲ್ಲೇ ಇರುವೆನೆನುತ
ಕುಡಿತಗಳ ಜನರ ನಡುವೆಯೇ
ಹೊರಳಾಡುತ್ತ ನೆರಳಾಡುತ್ತ
ಬೆಲೆಯೇ ಕಳೆದುಕೊಳ್ಳುತ್ತಿರುವಿಯಲ್ಲ ಲಕ್ಷ್ಮಿ
ಬಾಗಿಲು ತಟ್ಟಿ ಬರುವವಳಲ್ಲ ನೀನು
ಬಾಗಿಲು ಒದ್ದು ಹೋಗುವುದು ಮಾತ್ರ ಗೊತ್ತು
ಅದಕ್ಕೆಂದೇ ನೀನು ಚಂಚಲೆ ಲಕ್ಷ್ಮಿ
ಲಕ್ಷ್ಮಿ ಕಳೆದುಹೋದೆಯಲ್ಲೆ.

(Megesticನಲ್ಲಿ ಇತ್ತೀಚೆಗೆ ಸಾವಿರಾರು ರೂಪಾಯಿ ಕಳೆದುಕೊಂಡಾಗ, ವಾರವಿಡೀ ಆ ಬೇಸರದಲ್ಲಿಯೇ ಇದ್ದಾಗ ಬರದದ್ದು)
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...