Home / ಕವನ / ಕವಿತೆ / ಶಾಂತಿಧಾಮ

ಶಾಂತಿಧಾಮ

ಹೋಗೋಣ ಬನ್ನಿರಣ್ಣಾ ಸೂಕ್ಷೇತ್ರ ಹಾರಕೂಡಕೆ
ಗುರು ಚನ್ನವೀರರ ಶಾಂತಿಧಾಮಕ್ಕೆ ||ಪ||

ಮೊದಲಿಗೆ ಕಾಣುವುದು ಗುಡಿಶಿಖರವು
ನಂತರವ ಆಗುವುದು ಗುರುದರ್ಶನವು
ಜಾತಿ ಮತ ಪಂಥಗಳ ಭೇದವ ಅಳಿಸಿದಿ
ಒಂದೇ ತಾಯಿ ಮಕ್ಕಳೆಂದು ಸಾರಿ ನೀ ಹೇಳಿದಿ.

ಕನ್ನಡಾಂಬೆಯ ಮಡಿಲಲ್ಲಿ ಹುಟ್ಟಿ ಬೆಳದಿದಿ
ಮುಂದೇ ತನ್ನ ವಿದ್ಯಾರ್ಜನೆಗೆಂದು ಹೋದಿ.
ಹುಬ್ಬಳಿ ಮೂರು ಸಾವಿರ ಮಠದಲ್ಲಿ ಕಲಿತಿದಿ.
ಮಲೆನಾಡಿನಲ್ಲಿಯೇ ವಿದ್ಯಾಸಂಪೂರ್ಣ ಪಡದಿ.

ಮಹಾತ್ಮಗಾಂಧಿ ಆದರ್ಶ ಮಾರ್ಗವೇ ಅರಿತಿದಿ
ಧರ್ಮದ ಏಳಿಗೆಗಾಗಿ ಹಗಲಿರುಳು ದುಡಿಯುತ್ತಿದಿ.
ಅಂಧಕಾರದ ವಿರುದ್ಧ ಭಂಡೆಳಂದಿ.
ಪ್ರಮಾಣಿಕತೆಗಾಗಿ ಪ್ರಾಣ ಅರ್ಪಿಸಂದಿ.

ತನ್ನ ಪ್ರಾಣವನೇ ಮಾನವಕುಲಕ್ಕಾಗಿ ಅರ್ಪಿಸಿದಿ.
ಹಾಳ ಹರಕೂಡವನೇ ಕೈಲಾಸ ಏನಿಸುತ್ತಿದಿ.
ಕಾಯಕದಿಂದಲೇ ಸ್ವರ್ಗವೆಂದು ಸಾರುತ್ತಿದಿ.
ಶಾಂತಿಯಿಂದಲೇ ಜನರಿಗೆ ತಿಳಿಸಿ ನೀ ಹೇಳಿದಿ.

ಸುವಿಚಾರ ಕಲಿಸಿ ಸುಹೃದಯ ಮಾಡಿದಿ
ಝಕಣಚಾರಿಯಂತೆ ಹಗಲಿರುಳು ನಿದ್ರೆಗೆಟ್ಟು ಬಳಲಿದಿ
ವೀರಶೂರ ಧೀರನೆಂಬ ಕೀರ್ತಿಗೆ ಕಾರಣನಾದಿ.
ಗುರುದೇವೋಭವ ಎಂಬ ಕೀರ್ತಿಗೆ ಕಾರಣನಾದಿ.

ಓ ಪುಣ್ಯದ ಪುತ್ಥಳಿಯೇ ಬಾಳ ಬೆಳಕಿನ ಬೆಳ್ಳಿಚುಕ್ಕಿಯೆ
ನಿನ್ನ ಪುಣ್ಯದಿಂದ ಆ ಗುರುವನ್ನು ಕಂಡೆ.
ಮುಕ್ತಿಯ ಮಹಾ ಮಾರ್ಗವನ್ನು ಕಂಡೆ ನಿಜ
ಆ ಗುರುವೇ ಶ್ರೀ ಚನ್ನವೀರ ಶಿವಯೋಗಿ.
*****
೦೭/೦೫/೧೯೯೬

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...