Home / ಕವನ / ಕವಿತೆ / ಶಾಂತಿಧಾಮ

ಶಾಂತಿಧಾಮ

ಹೋಗೋಣ ಬನ್ನಿರಣ್ಣಾ ಸೂಕ್ಷೇತ್ರ ಹಾರಕೂಡಕೆ
ಗುರು ಚನ್ನವೀರರ ಶಾಂತಿಧಾಮಕ್ಕೆ ||ಪ||

ಮೊದಲಿಗೆ ಕಾಣುವುದು ಗುಡಿಶಿಖರವು
ನಂತರವ ಆಗುವುದು ಗುರುದರ್ಶನವು
ಜಾತಿ ಮತ ಪಂಥಗಳ ಭೇದವ ಅಳಿಸಿದಿ
ಒಂದೇ ತಾಯಿ ಮಕ್ಕಳೆಂದು ಸಾರಿ ನೀ ಹೇಳಿದಿ.

ಕನ್ನಡಾಂಬೆಯ ಮಡಿಲಲ್ಲಿ ಹುಟ್ಟಿ ಬೆಳದಿದಿ
ಮುಂದೇ ತನ್ನ ವಿದ್ಯಾರ್ಜನೆಗೆಂದು ಹೋದಿ.
ಹುಬ್ಬಳಿ ಮೂರು ಸಾವಿರ ಮಠದಲ್ಲಿ ಕಲಿತಿದಿ.
ಮಲೆನಾಡಿನಲ್ಲಿಯೇ ವಿದ್ಯಾಸಂಪೂರ್ಣ ಪಡದಿ.

ಮಹಾತ್ಮಗಾಂಧಿ ಆದರ್ಶ ಮಾರ್ಗವೇ ಅರಿತಿದಿ
ಧರ್ಮದ ಏಳಿಗೆಗಾಗಿ ಹಗಲಿರುಳು ದುಡಿಯುತ್ತಿದಿ.
ಅಂಧಕಾರದ ವಿರುದ್ಧ ಭಂಡೆಳಂದಿ.
ಪ್ರಮಾಣಿಕತೆಗಾಗಿ ಪ್ರಾಣ ಅರ್ಪಿಸಂದಿ.

ತನ್ನ ಪ್ರಾಣವನೇ ಮಾನವಕುಲಕ್ಕಾಗಿ ಅರ್ಪಿಸಿದಿ.
ಹಾಳ ಹರಕೂಡವನೇ ಕೈಲಾಸ ಏನಿಸುತ್ತಿದಿ.
ಕಾಯಕದಿಂದಲೇ ಸ್ವರ್ಗವೆಂದು ಸಾರುತ್ತಿದಿ.
ಶಾಂತಿಯಿಂದಲೇ ಜನರಿಗೆ ತಿಳಿಸಿ ನೀ ಹೇಳಿದಿ.

ಸುವಿಚಾರ ಕಲಿಸಿ ಸುಹೃದಯ ಮಾಡಿದಿ
ಝಕಣಚಾರಿಯಂತೆ ಹಗಲಿರುಳು ನಿದ್ರೆಗೆಟ್ಟು ಬಳಲಿದಿ
ವೀರಶೂರ ಧೀರನೆಂಬ ಕೀರ್ತಿಗೆ ಕಾರಣನಾದಿ.
ಗುರುದೇವೋಭವ ಎಂಬ ಕೀರ್ತಿಗೆ ಕಾರಣನಾದಿ.

ಓ ಪುಣ್ಯದ ಪುತ್ಥಳಿಯೇ ಬಾಳ ಬೆಳಕಿನ ಬೆಳ್ಳಿಚುಕ್ಕಿಯೆ
ನಿನ್ನ ಪುಣ್ಯದಿಂದ ಆ ಗುರುವನ್ನು ಕಂಡೆ.
ಮುಕ್ತಿಯ ಮಹಾ ಮಾರ್ಗವನ್ನು ಕಂಡೆ ನಿಜ
ಆ ಗುರುವೇ ಶ್ರೀ ಚನ್ನವೀರ ಶಿವಯೋಗಿ.
*****
೦೭/೦೫/೧೯೯೬

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...