Home / ಕವನ / ಕವಿತೆ / ಶಾಂತಿಧಾಮ

ಶಾಂತಿಧಾಮ

ಹೋಗೋಣ ಬನ್ನಿರಣ್ಣಾ ಸೂಕ್ಷೇತ್ರ ಹಾರಕೂಡಕೆ
ಗುರು ಚನ್ನವೀರರ ಶಾಂತಿಧಾಮಕ್ಕೆ ||ಪ||

ಮೊದಲಿಗೆ ಕಾಣುವುದು ಗುಡಿಶಿಖರವು
ನಂತರವ ಆಗುವುದು ಗುರುದರ್ಶನವು
ಜಾತಿ ಮತ ಪಂಥಗಳ ಭೇದವ ಅಳಿಸಿದಿ
ಒಂದೇ ತಾಯಿ ಮಕ್ಕಳೆಂದು ಸಾರಿ ನೀ ಹೇಳಿದಿ.

ಕನ್ನಡಾಂಬೆಯ ಮಡಿಲಲ್ಲಿ ಹುಟ್ಟಿ ಬೆಳದಿದಿ
ಮುಂದೇ ತನ್ನ ವಿದ್ಯಾರ್ಜನೆಗೆಂದು ಹೋದಿ.
ಹುಬ್ಬಳಿ ಮೂರು ಸಾವಿರ ಮಠದಲ್ಲಿ ಕಲಿತಿದಿ.
ಮಲೆನಾಡಿನಲ್ಲಿಯೇ ವಿದ್ಯಾಸಂಪೂರ್ಣ ಪಡದಿ.

ಮಹಾತ್ಮಗಾಂಧಿ ಆದರ್ಶ ಮಾರ್ಗವೇ ಅರಿತಿದಿ
ಧರ್ಮದ ಏಳಿಗೆಗಾಗಿ ಹಗಲಿರುಳು ದುಡಿಯುತ್ತಿದಿ.
ಅಂಧಕಾರದ ವಿರುದ್ಧ ಭಂಡೆಳಂದಿ.
ಪ್ರಮಾಣಿಕತೆಗಾಗಿ ಪ್ರಾಣ ಅರ್ಪಿಸಂದಿ.

ತನ್ನ ಪ್ರಾಣವನೇ ಮಾನವಕುಲಕ್ಕಾಗಿ ಅರ್ಪಿಸಿದಿ.
ಹಾಳ ಹರಕೂಡವನೇ ಕೈಲಾಸ ಏನಿಸುತ್ತಿದಿ.
ಕಾಯಕದಿಂದಲೇ ಸ್ವರ್ಗವೆಂದು ಸಾರುತ್ತಿದಿ.
ಶಾಂತಿಯಿಂದಲೇ ಜನರಿಗೆ ತಿಳಿಸಿ ನೀ ಹೇಳಿದಿ.

ಸುವಿಚಾರ ಕಲಿಸಿ ಸುಹೃದಯ ಮಾಡಿದಿ
ಝಕಣಚಾರಿಯಂತೆ ಹಗಲಿರುಳು ನಿದ್ರೆಗೆಟ್ಟು ಬಳಲಿದಿ
ವೀರಶೂರ ಧೀರನೆಂಬ ಕೀರ್ತಿಗೆ ಕಾರಣನಾದಿ.
ಗುರುದೇವೋಭವ ಎಂಬ ಕೀರ್ತಿಗೆ ಕಾರಣನಾದಿ.

ಓ ಪುಣ್ಯದ ಪುತ್ಥಳಿಯೇ ಬಾಳ ಬೆಳಕಿನ ಬೆಳ್ಳಿಚುಕ್ಕಿಯೆ
ನಿನ್ನ ಪುಣ್ಯದಿಂದ ಆ ಗುರುವನ್ನು ಕಂಡೆ.
ಮುಕ್ತಿಯ ಮಹಾ ಮಾರ್ಗವನ್ನು ಕಂಡೆ ನಿಜ
ಆ ಗುರುವೇ ಶ್ರೀ ಚನ್ನವೀರ ಶಿವಯೋಗಿ.
*****
೦೭/೦೫/೧೯೯೬

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...