Home / ಕವನ / ಕವಿತೆ / ದೇಶದ ಕೃಷಿಕನೇ

ದೇಶದ ಕೃಷಿಕನೇ

ಕೃಷಿ ಮಾಡುವ ರೈತನೆ ನೀನು
ರಾಷ್ಟ್ರದ ಶ್ರೇಷ್ಠ ವ್ಯಕ್ತಿತ್ವ ನಿನ್ನದು
ದೇಶದ ಸಹಸ್ರಾರು ಜನತೆಗೆ ಬದುಕುಳಿಯಲು
ಆಹಾರ ಧಾನ್ಯವು ಪೂರೈಸುವ ದೇಶದ ರೈತ ನೀನು

ಹಗಲಿರುಳು ಎನ್ನದೇ ಹೊಲದಲ್ಲಿ ದುಡಿದು
ಆಹಾರ ಧಾನ್ಯ ಬೆಳೆ ಬೆಳೆಸುವನು ನೀನು
ತನ್ನ ಸಹಾಯಕ್ಕಾಗಿ ಎರಡೆತ್ತು ತೆಗೆದು
ಹೊಲವನ್ನು ಚನ್ನಾಗಿ ಉಳುಮೆ ಮಾಡುವನು ನೀನು.

ಹೊಲವನ್ನು ಚನ್ನಾಗಿ ಉಳುಮೆ ಮಾಡಿ
ಬೀಜ ಉತ್ತಿಬಿತ್ತಿ ಮಳೆಯರಾಯನಿಗಾಗಿ ಕಾಯುವನು ನೀನು
ಮಳೆರಾಯ ಸರಿಯಾಗಿ ಸಮಯಕ್ಕೆ ಬಂದರೆ
ಭೂತಾಯಿ ಬೆಳೆದು ಹೊತ್ತುಕೊಂಡು ನಿಲುವಳು.

ರಿಕ್ತತೆಯ ಬಡತನದಿ ಬಳಲುತ
ಸುಖಮಯ ಜೀವನ ಸಾಗಿಸುವನು ನೀನು
ಭೂಮಿತಾಯಿ ಹೊತ್ತುಕೊಂಡು ನಿಂತ ಬೆಳೆ
ಕಂಡು ಹೃದಯದಿ ಸಂತಸ ಪಡುವನು ನೀನು.

ಬಡಜನರಿಂದ ಕೂಡಿದ ಶ್ರೀಮಂತ ರಾಷ್ಟ್ರವೆಂದು
ಅರಿತು ಆರ್ಥಿಕ ಪ್ರಗತಿ ಸಾಧಿಸುವನು ನೀನು
ಹಬ್ಬ ಹರಿದಿನಗಳಲ್ಲಿ ಭೂತಾಯಿಗೆ ಗೌರವದಿ
ಪೂಜ್ಯನೆ ಭಾವದಿ ಆರಾಧಿಸುವನು ನೀನು.

ಯಾರ ಜೀವನದ ಬಗ್ಗೆ ಅವಹೇಳನ ಬಯಸದೇ
ತನ್ನ ಜೀವನದಿ ತಾ ಒಳಿತನು ಬಯಸುವನು
ಯಾರ ವಿಮರ್ಶೆಗೆ ಬಲಿಯಾಗದೇ ತಾ
ಸರೋವರದಂತೆ ಜೀವನ ಸಾಗಿಸುವನು ನೀನು.

ಗುರಿ ಮುಟ್ಟುವದಕ್ಕೆ ಸತತ ಸಾಧನೆ ಗೈದಿ
ಧಾನ್ಯ ಬೆಳೆಸುವಲ್ಲಿ ನೀ ಸಫಲನಾದಿ
ಬ್ರಹ್ಮ, ವಿಷ್ಣು, ಮಹೇಶ್ವರರ ಸ್ವರೂಪನಾದಿ
ಜಗವಿರುವವರೆಗೆ ಜಗಭರಿತ ರೈತ ನೀ ನಾದಿ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...