Home / ಕವನ / ಕವಿತೆ / ದೇಶದ ಕೃಷಿಕನೇ

ದೇಶದ ಕೃಷಿಕನೇ

ಕೃಷಿ ಮಾಡುವ ರೈತನೆ ನೀನು
ರಾಷ್ಟ್ರದ ಶ್ರೇಷ್ಠ ವ್ಯಕ್ತಿತ್ವ ನಿನ್ನದು
ದೇಶದ ಸಹಸ್ರಾರು ಜನತೆಗೆ ಬದುಕುಳಿಯಲು
ಆಹಾರ ಧಾನ್ಯವು ಪೂರೈಸುವ ದೇಶದ ರೈತ ನೀನು

ಹಗಲಿರುಳು ಎನ್ನದೇ ಹೊಲದಲ್ಲಿ ದುಡಿದು
ಆಹಾರ ಧಾನ್ಯ ಬೆಳೆ ಬೆಳೆಸುವನು ನೀನು
ತನ್ನ ಸಹಾಯಕ್ಕಾಗಿ ಎರಡೆತ್ತು ತೆಗೆದು
ಹೊಲವನ್ನು ಚನ್ನಾಗಿ ಉಳುಮೆ ಮಾಡುವನು ನೀನು.

ಹೊಲವನ್ನು ಚನ್ನಾಗಿ ಉಳುಮೆ ಮಾಡಿ
ಬೀಜ ಉತ್ತಿಬಿತ್ತಿ ಮಳೆಯರಾಯನಿಗಾಗಿ ಕಾಯುವನು ನೀನು
ಮಳೆರಾಯ ಸರಿಯಾಗಿ ಸಮಯಕ್ಕೆ ಬಂದರೆ
ಭೂತಾಯಿ ಬೆಳೆದು ಹೊತ್ತುಕೊಂಡು ನಿಲುವಳು.

ರಿಕ್ತತೆಯ ಬಡತನದಿ ಬಳಲುತ
ಸುಖಮಯ ಜೀವನ ಸಾಗಿಸುವನು ನೀನು
ಭೂಮಿತಾಯಿ ಹೊತ್ತುಕೊಂಡು ನಿಂತ ಬೆಳೆ
ಕಂಡು ಹೃದಯದಿ ಸಂತಸ ಪಡುವನು ನೀನು.

ಬಡಜನರಿಂದ ಕೂಡಿದ ಶ್ರೀಮಂತ ರಾಷ್ಟ್ರವೆಂದು
ಅರಿತು ಆರ್ಥಿಕ ಪ್ರಗತಿ ಸಾಧಿಸುವನು ನೀನು
ಹಬ್ಬ ಹರಿದಿನಗಳಲ್ಲಿ ಭೂತಾಯಿಗೆ ಗೌರವದಿ
ಪೂಜ್ಯನೆ ಭಾವದಿ ಆರಾಧಿಸುವನು ನೀನು.

ಯಾರ ಜೀವನದ ಬಗ್ಗೆ ಅವಹೇಳನ ಬಯಸದೇ
ತನ್ನ ಜೀವನದಿ ತಾ ಒಳಿತನು ಬಯಸುವನು
ಯಾರ ವಿಮರ್ಶೆಗೆ ಬಲಿಯಾಗದೇ ತಾ
ಸರೋವರದಂತೆ ಜೀವನ ಸಾಗಿಸುವನು ನೀನು.

ಗುರಿ ಮುಟ್ಟುವದಕ್ಕೆ ಸತತ ಸಾಧನೆ ಗೈದಿ
ಧಾನ್ಯ ಬೆಳೆಸುವಲ್ಲಿ ನೀ ಸಫಲನಾದಿ
ಬ್ರಹ್ಮ, ವಿಷ್ಣು, ಮಹೇಶ್ವರರ ಸ್ವರೂಪನಾದಿ
ಜಗವಿರುವವರೆಗೆ ಜಗಭರಿತ ರೈತ ನೀ ನಾದಿ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...