Home / ಕವನ / ಕವಿತೆ / ದೇಶದ ಕೃಷಿಕನೇ

ದೇಶದ ಕೃಷಿಕನೇ

ಕೃಷಿ ಮಾಡುವ ರೈತನೆ ನೀನು
ರಾಷ್ಟ್ರದ ಶ್ರೇಷ್ಠ ವ್ಯಕ್ತಿತ್ವ ನಿನ್ನದು
ದೇಶದ ಸಹಸ್ರಾರು ಜನತೆಗೆ ಬದುಕುಳಿಯಲು
ಆಹಾರ ಧಾನ್ಯವು ಪೂರೈಸುವ ದೇಶದ ರೈತ ನೀನು

ಹಗಲಿರುಳು ಎನ್ನದೇ ಹೊಲದಲ್ಲಿ ದುಡಿದು
ಆಹಾರ ಧಾನ್ಯ ಬೆಳೆ ಬೆಳೆಸುವನು ನೀನು
ತನ್ನ ಸಹಾಯಕ್ಕಾಗಿ ಎರಡೆತ್ತು ತೆಗೆದು
ಹೊಲವನ್ನು ಚನ್ನಾಗಿ ಉಳುಮೆ ಮಾಡುವನು ನೀನು.

ಹೊಲವನ್ನು ಚನ್ನಾಗಿ ಉಳುಮೆ ಮಾಡಿ
ಬೀಜ ಉತ್ತಿಬಿತ್ತಿ ಮಳೆಯರಾಯನಿಗಾಗಿ ಕಾಯುವನು ನೀನು
ಮಳೆರಾಯ ಸರಿಯಾಗಿ ಸಮಯಕ್ಕೆ ಬಂದರೆ
ಭೂತಾಯಿ ಬೆಳೆದು ಹೊತ್ತುಕೊಂಡು ನಿಲುವಳು.

ರಿಕ್ತತೆಯ ಬಡತನದಿ ಬಳಲುತ
ಸುಖಮಯ ಜೀವನ ಸಾಗಿಸುವನು ನೀನು
ಭೂಮಿತಾಯಿ ಹೊತ್ತುಕೊಂಡು ನಿಂತ ಬೆಳೆ
ಕಂಡು ಹೃದಯದಿ ಸಂತಸ ಪಡುವನು ನೀನು.

ಬಡಜನರಿಂದ ಕೂಡಿದ ಶ್ರೀಮಂತ ರಾಷ್ಟ್ರವೆಂದು
ಅರಿತು ಆರ್ಥಿಕ ಪ್ರಗತಿ ಸಾಧಿಸುವನು ನೀನು
ಹಬ್ಬ ಹರಿದಿನಗಳಲ್ಲಿ ಭೂತಾಯಿಗೆ ಗೌರವದಿ
ಪೂಜ್ಯನೆ ಭಾವದಿ ಆರಾಧಿಸುವನು ನೀನು.

ಯಾರ ಜೀವನದ ಬಗ್ಗೆ ಅವಹೇಳನ ಬಯಸದೇ
ತನ್ನ ಜೀವನದಿ ತಾ ಒಳಿತನು ಬಯಸುವನು
ಯಾರ ವಿಮರ್ಶೆಗೆ ಬಲಿಯಾಗದೇ ತಾ
ಸರೋವರದಂತೆ ಜೀವನ ಸಾಗಿಸುವನು ನೀನು.

ಗುರಿ ಮುಟ್ಟುವದಕ್ಕೆ ಸತತ ಸಾಧನೆ ಗೈದಿ
ಧಾನ್ಯ ಬೆಳೆಸುವಲ್ಲಿ ನೀ ಸಫಲನಾದಿ
ಬ್ರಹ್ಮ, ವಿಷ್ಣು, ಮಹೇಶ್ವರರ ಸ್ವರೂಪನಾದಿ
ಜಗವಿರುವವರೆಗೆ ಜಗಭರಿತ ರೈತ ನೀ ನಾದಿ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...