Home / ಕವನ / ಕವಿತೆ / ದೇಶದ ಕೃಷಿಕನೇ

ದೇಶದ ಕೃಷಿಕನೇ

ಕೃಷಿ ಮಾಡುವ ರೈತನೆ ನೀನು
ರಾಷ್ಟ್ರದ ಶ್ರೇಷ್ಠ ವ್ಯಕ್ತಿತ್ವ ನಿನ್ನದು
ದೇಶದ ಸಹಸ್ರಾರು ಜನತೆಗೆ ಬದುಕುಳಿಯಲು
ಆಹಾರ ಧಾನ್ಯವು ಪೂರೈಸುವ ದೇಶದ ರೈತ ನೀನು

ಹಗಲಿರುಳು ಎನ್ನದೇ ಹೊಲದಲ್ಲಿ ದುಡಿದು
ಆಹಾರ ಧಾನ್ಯ ಬೆಳೆ ಬೆಳೆಸುವನು ನೀನು
ತನ್ನ ಸಹಾಯಕ್ಕಾಗಿ ಎರಡೆತ್ತು ತೆಗೆದು
ಹೊಲವನ್ನು ಚನ್ನಾಗಿ ಉಳುಮೆ ಮಾಡುವನು ನೀನು.

ಹೊಲವನ್ನು ಚನ್ನಾಗಿ ಉಳುಮೆ ಮಾಡಿ
ಬೀಜ ಉತ್ತಿಬಿತ್ತಿ ಮಳೆಯರಾಯನಿಗಾಗಿ ಕಾಯುವನು ನೀನು
ಮಳೆರಾಯ ಸರಿಯಾಗಿ ಸಮಯಕ್ಕೆ ಬಂದರೆ
ಭೂತಾಯಿ ಬೆಳೆದು ಹೊತ್ತುಕೊಂಡು ನಿಲುವಳು.

ರಿಕ್ತತೆಯ ಬಡತನದಿ ಬಳಲುತ
ಸುಖಮಯ ಜೀವನ ಸಾಗಿಸುವನು ನೀನು
ಭೂಮಿತಾಯಿ ಹೊತ್ತುಕೊಂಡು ನಿಂತ ಬೆಳೆ
ಕಂಡು ಹೃದಯದಿ ಸಂತಸ ಪಡುವನು ನೀನು.

ಬಡಜನರಿಂದ ಕೂಡಿದ ಶ್ರೀಮಂತ ರಾಷ್ಟ್ರವೆಂದು
ಅರಿತು ಆರ್ಥಿಕ ಪ್ರಗತಿ ಸಾಧಿಸುವನು ನೀನು
ಹಬ್ಬ ಹರಿದಿನಗಳಲ್ಲಿ ಭೂತಾಯಿಗೆ ಗೌರವದಿ
ಪೂಜ್ಯನೆ ಭಾವದಿ ಆರಾಧಿಸುವನು ನೀನು.

ಯಾರ ಜೀವನದ ಬಗ್ಗೆ ಅವಹೇಳನ ಬಯಸದೇ
ತನ್ನ ಜೀವನದಿ ತಾ ಒಳಿತನು ಬಯಸುವನು
ಯಾರ ವಿಮರ್ಶೆಗೆ ಬಲಿಯಾಗದೇ ತಾ
ಸರೋವರದಂತೆ ಜೀವನ ಸಾಗಿಸುವನು ನೀನು.

ಗುರಿ ಮುಟ್ಟುವದಕ್ಕೆ ಸತತ ಸಾಧನೆ ಗೈದಿ
ಧಾನ್ಯ ಬೆಳೆಸುವಲ್ಲಿ ನೀ ಸಫಲನಾದಿ
ಬ್ರಹ್ಮ, ವಿಷ್ಣು, ಮಹೇಶ್ವರರ ಸ್ವರೂಪನಾದಿ
ಜಗವಿರುವವರೆಗೆ ಜಗಭರಿತ ರೈತ ನೀ ನಾದಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...