Home / ಕವನ / ಕವಿತೆ / ಕನ್ನಡ ರಕ್ಷಿಸ ಬನ್ನಿರೋ

ಕನ್ನಡ ರಕ್ಷಿಸ ಬನ್ನಿರೋ

ಬನ್ನಿ ಬನ್ನಿ ಕನ್ನಡಿಗರೆ ಒಂದಾಗಿ ಸೇರೋಣ ಬನ್ನಿರೋ
ಕನ್ನಡ ಜ್ಯೋತಿ ಕನ್ನಡದ ಕೀರ್ತಿ ಬೆಳಗಿಸೋಣ ಬನ್ನಿರೋ

ಸಾವಿರಾರು ಜೀವಿಗಳಿಂದ ಕನ್ನಡದ ಕೀರ್ತಿ
ಮೊಳಗಿಸುತ್ತಾ ಬೆಳಗಿಸುತ್ತಾ ಬಂದಿದೆ ರಕ್ಷಿಸೋಣ ಬನ್ನಿರೋ
ಕನ್ನಡ ನಾಡಿನ ಜಲನೆಲ ತಮಗೆಲ್ಲ
ಕಲ್ಪವೃಕ್ಷ ನಾಡು ನುಡಿಯೇ ರಕ್ಷಿಸೋಣ ಬನ್ನಿರೋ

ಕನ್ನಡವೆಂಬ ವಿದ್ಯಾ ಮಂದಿರಲ್ಲಿ ಕುಳಿತು
ಕನ್ನಡಿಗನೆಂಬ ಗುರುವಿನೊಂದಿಗೆ ನಲಿಯುತ್ತ
ಕನ್ನಡವ ಓದು-ಬರಹ ಕಲಿಯಲು ಬನ್ನಿರೋ
ಓ ಕನ್ನಡಿಗರೆ ಓಡೋಡಿ ಬನ್ನಿರೋ

ಕರ್ನಾಟಕ ರಾಜ್ಯದಲ್ಲಿ ಕನ್ನಡವ ಅರಿತು
ಕನ್ನಡ ಭಾಷೆಗೆ ರಕ್ಷಿಸಲು ಮುಂದೆ ಬನ್ನಿರೋ
ಕನ್ನಡಿಗರ ಮನಮನದೂದ್ದಕ್ಕೂ ಕನ್ನಡ ಕಹಳೆ
ಕನ್ನಡವೇ ಉಸಿರಾಗಿಸೋಣ ಬನ್ನಿರೋ

ಜಾತಿ ಮತ ಪಂಥ ಭೇದವ ಮರೆತು
ಕನ್ನಡಕ್ಕಾಗಿ ಹೋರಾಟಕೆ ಹೊರಾಡ ಬನ್ನಿರೋ
ದೇಶದೂದ್ದಕ್ಕೂ ಕನ್ನಡವೆಂಬ ಕಹಳೆ
ಮೊಳಗಿಸಲು ಓ ಪ್ರೀಯ ಕನ್ನಡಿಗರೆ ಬನ್ನಿರೋ

ಕನ್ನಡ ತಾಯಿ ನುಡಿಯೇ ಮಧುರ
ಕನ್ನಡವೇ ಸುಲಭ ಕನ್ನಡವೇ ಸುಂದರ
ಕನ್ನಡಾಂಬೆಯ ತವರು ಕರ್ನಾಟಕವೇ
ಎಂದು ಆತ್ಮ ಸ್ಥೈರ್ಯದಿ ಸಾರಿ ಹೇಳ ಬನ್ನಿರೋ

ಕನ್ನಡವೇ ನಮ್ಮ ನಿಮ್ಮೆಲ್ಲರ
ಉಸಿರಾಗಿಸೋಣ ಬನ್ನಿರೋ ಬೇಗ ಬನ್ನಿರೋ
ಓ ಕನ್ನಡಾಭಿಮಾನಿಗಳೆ ಬನ್ನಿರೋ
ಕನ್ನಡಾಂಬೆಗೆ ನಮೋ ಹೇಳ ಬನ್ನಿರೋ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...