Home / ಕವನ / ಕವಿತೆ / ಕನ್ನಡ ರಕ್ಷಿಸ ಬನ್ನಿರೋ

ಕನ್ನಡ ರಕ್ಷಿಸ ಬನ್ನಿರೋ

ಬನ್ನಿ ಬನ್ನಿ ಕನ್ನಡಿಗರೆ ಒಂದಾಗಿ ಸೇರೋಣ ಬನ್ನಿರೋ
ಕನ್ನಡ ಜ್ಯೋತಿ ಕನ್ನಡದ ಕೀರ್ತಿ ಬೆಳಗಿಸೋಣ ಬನ್ನಿರೋ

ಸಾವಿರಾರು ಜೀವಿಗಳಿಂದ ಕನ್ನಡದ ಕೀರ್ತಿ
ಮೊಳಗಿಸುತ್ತಾ ಬೆಳಗಿಸುತ್ತಾ ಬಂದಿದೆ ರಕ್ಷಿಸೋಣ ಬನ್ನಿರೋ
ಕನ್ನಡ ನಾಡಿನ ಜಲನೆಲ ತಮಗೆಲ್ಲ
ಕಲ್ಪವೃಕ್ಷ ನಾಡು ನುಡಿಯೇ ರಕ್ಷಿಸೋಣ ಬನ್ನಿರೋ

ಕನ್ನಡವೆಂಬ ವಿದ್ಯಾ ಮಂದಿರಲ್ಲಿ ಕುಳಿತು
ಕನ್ನಡಿಗನೆಂಬ ಗುರುವಿನೊಂದಿಗೆ ನಲಿಯುತ್ತ
ಕನ್ನಡವ ಓದು-ಬರಹ ಕಲಿಯಲು ಬನ್ನಿರೋ
ಓ ಕನ್ನಡಿಗರೆ ಓಡೋಡಿ ಬನ್ನಿರೋ

ಕರ್ನಾಟಕ ರಾಜ್ಯದಲ್ಲಿ ಕನ್ನಡವ ಅರಿತು
ಕನ್ನಡ ಭಾಷೆಗೆ ರಕ್ಷಿಸಲು ಮುಂದೆ ಬನ್ನಿರೋ
ಕನ್ನಡಿಗರ ಮನಮನದೂದ್ದಕ್ಕೂ ಕನ್ನಡ ಕಹಳೆ
ಕನ್ನಡವೇ ಉಸಿರಾಗಿಸೋಣ ಬನ್ನಿರೋ

ಜಾತಿ ಮತ ಪಂಥ ಭೇದವ ಮರೆತು
ಕನ್ನಡಕ್ಕಾಗಿ ಹೋರಾಟಕೆ ಹೊರಾಡ ಬನ್ನಿರೋ
ದೇಶದೂದ್ದಕ್ಕೂ ಕನ್ನಡವೆಂಬ ಕಹಳೆ
ಮೊಳಗಿಸಲು ಓ ಪ್ರೀಯ ಕನ್ನಡಿಗರೆ ಬನ್ನಿರೋ

ಕನ್ನಡ ತಾಯಿ ನುಡಿಯೇ ಮಧುರ
ಕನ್ನಡವೇ ಸುಲಭ ಕನ್ನಡವೇ ಸುಂದರ
ಕನ್ನಡಾಂಬೆಯ ತವರು ಕರ್ನಾಟಕವೇ
ಎಂದು ಆತ್ಮ ಸ್ಥೈರ್ಯದಿ ಸಾರಿ ಹೇಳ ಬನ್ನಿರೋ

ಕನ್ನಡವೇ ನಮ್ಮ ನಿಮ್ಮೆಲ್ಲರ
ಉಸಿರಾಗಿಸೋಣ ಬನ್ನಿರೋ ಬೇಗ ಬನ್ನಿರೋ
ಓ ಕನ್ನಡಾಭಿಮಾನಿಗಳೆ ಬನ್ನಿರೋ
ಕನ್ನಡಾಂಬೆಗೆ ನಮೋ ಹೇಳ ಬನ್ನಿರೋ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...