ಸುಂದರತೆಯಾನಂದ ಅಮರವೆಂದನು ಅಂದು
ಕವಿ ಕೀಟ್ಸು ಕಲ್ಪನೆಯ ಕನಸಿನಲಿ ಮೈಮರೆತು;
ನನಸಿನಲಿ ತಾನೊಲಿದ ಸೌಂದರ್ಯದಲಿ ಬೆಂದು,
ಅದು ತನಗೆ ದೊರಕದೆಯೆ ಸಾಗಿಹೋಗುವುದರಿತು
ಸಾವ ಸುಖ ಬಯಸಿದನು ! ತಂಗಾಳಿ ಬೀಸುತಲಿ
ಹೊತ್ತು ತರುವಂದದಲಿ ಹೊಸ ಹೂವ ಪರಿಮಳವ,
ಸೌಂದರ್ಯ ಕಂಡೊಡನೆ ಆನಂದ ಸೂಸುತಲಿ
ಹುದುಗಿಸುತ ತನ್ನೊಳಗೆ ತಹುದು ದುಗುಡದ ನೋವ!
ಮೊದಲ ಪರಿಚಯವಾಗಿ ನಿನ್ನ ನೋಡುತಲಂದು,
ಇನಿತು ದಿನವೂ ಬಯಸಿ, ಯುಗ ಯುಗದ ಕನಸಿನಲಿ
ನೆನೆದ ಸೌಂದರ್ಯವೇ ನನಗೆ ದೊರಕಿಹುದೆಂದು
ಹಿಗ್ಗಿದೆನು ಸಂತಸದಿ!- ಅಂದಿನಾನಂದದಲಿ
ಮುಚ್ಚಿತ್ತು ಈ ನೋವು! ನೀನೆಲ್ಲೋ, ನಾನೆಲ್ಲೊ
ಇಂದು! ಅದಕ್ಕಾಗಿಯೇ ಅಂದು ಕೂಡಿದೆವೆಲ್ಲೊ!
*****
Related Post
ಸಣ್ಣ ಕತೆ
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಆನುಗೋಲು
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…
-
ಮುದುಕನ ಮದುವೆ
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
-
ನಾಗನ ವರಿಸಿದ ಬಿಂಬಾಲಿ…
ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…
-
ಹೃದಯ ವೀಣೆ ಮಿಡಿಯೆ….
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…