ಯಾವುದ ನೆನೆಯಲಿ, ಯಾವುದ ಬಿಡಲಿ?

ನಾವೀರ್ವರು ಜತೆಗೂಡುತ ಕಳೆದಾ
ಸುಖದ ಹೂವ ಹೊಂಬಾಳನು ನೆನೆವೆನೆ,
ಕಣ್ಣು ಮಿಡಿಯುವುದು ದುಃಖದ ಹನಿಯಳಿದಾ
ಬಾಳಿಂದಿಲ್ಲವೆ, ಸೇರಿರೆ, ಅಳಿಮನೆ !
ಗೆಳತಿ, ಯಾವುದ ನೆನೆಯಲಿ, ಯಾವುದ ಬಿಡಲಿ?

ಅಂದು ಒಲವಿನ ಮೊದಲಿನ ಮುತ್ತಲಿ
ಲಜ್ಜೆ ಸಂತಸದ ಕಮಲದ ಮುಖವನು
ನೆನೆದರೆ, ತರುವುದು ಕೊನೆಯ ಚಣಗಳಲಿ
ಸಾವದ ಸೆರೆಮಾಡಿದ ಹದನು!
ಗೆಳತಿ, ಯಾವುದ ನೆನೆಯಲಿ, ಯಾವುದ ಬಿಡಲಿ?

ಸುಖ ನೆನೆದರೆ, ಬೆನ್ನಿಗೆ ಬರುವುದು
ದುಃಖದ ಬಾನಿನ ಶೂನ್ಯದ ಮರು ದನಿ!
ದುಃಖವ ನೆನೆದರೆ, ವಿರಹದ ಬಾಳಿದು
ಸಾವಿನ ಕಡಲಲಿ ಆಯಿತೊಂದು ಹನಿ!
ಗೆಳತಿ, ಯಾವುದ ನೆನೆಯಲಿ, ಯಾವುದ ಬಿಡಲಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಂಕಿ ಮಳೆ
Next post ಹಾಗೆ ಸುಮ್ಮನೆ

ಸಣ್ಣ ಕತೆ

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…