ಯಾವುದ ನೆನೆಯಲಿ, ಯಾವುದ ಬಿಡಲಿ?

ನಾವೀರ್ವರು ಜತೆಗೂಡುತ ಕಳೆದಾ
ಸುಖದ ಹೂವ ಹೊಂಬಾಳನು ನೆನೆವೆನೆ,
ಕಣ್ಣು ಮಿಡಿಯುವುದು ದುಃಖದ ಹನಿಯಳಿದಾ
ಬಾಳಿಂದಿಲ್ಲವೆ, ಸೇರಿರೆ, ಅಳಿಮನೆ !
ಗೆಳತಿ, ಯಾವುದ ನೆನೆಯಲಿ, ಯಾವುದ ಬಿಡಲಿ?

ಅಂದು ಒಲವಿನ ಮೊದಲಿನ ಮುತ್ತಲಿ
ಲಜ್ಜೆ ಸಂತಸದ ಕಮಲದ ಮುಖವನು
ನೆನೆದರೆ, ತರುವುದು ಕೊನೆಯ ಚಣಗಳಲಿ
ಸಾವದ ಸೆರೆಮಾಡಿದ ಹದನು!
ಗೆಳತಿ, ಯಾವುದ ನೆನೆಯಲಿ, ಯಾವುದ ಬಿಡಲಿ?

ಸುಖ ನೆನೆದರೆ, ಬೆನ್ನಿಗೆ ಬರುವುದು
ದುಃಖದ ಬಾನಿನ ಶೂನ್ಯದ ಮರು ದನಿ!
ದುಃಖವ ನೆನೆದರೆ, ವಿರಹದ ಬಾಳಿದು
ಸಾವಿನ ಕಡಲಲಿ ಆಯಿತೊಂದು ಹನಿ!
ಗೆಳತಿ, ಯಾವುದ ನೆನೆಯಲಿ, ಯಾವುದ ಬಿಡಲಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಂಕಿ ಮಳೆ
Next post ಹಾಗೆ ಸುಮ್ಮನೆ

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…