ಓ ಬೆಂಕಿ! ಸಾಗರದ ನೂರ್ಲಕ್ಷ ಅಲೆಗಳಿಗೆ
ಬೆಂಕಿ ಹೊತ್ತಿಸಿದಂತೆ ಕೆನ್ನಾಲಗೆಯನೆತ್ತಿ
ಹೊರಳಿಸಿದೆ! ಈಗಿನ್ನು – ಕಳೆದಿಲ್ಲ ಅರೆಗಳಿಗೆ!-
ದಡದ ಮರಳಿನ ಅಮಿತ ಸೇನೆಯನು ಹಿಂದೊತ್ತಿ,
ತಡಿಯೆಲ್ಲ ತನಗೆಂದು, ಮುನ್ಮುಂದೆ ಒತ್ತೊತ್ತಿ,
ಮೇಲೇರಿ, ಗರ್ಜಿಸುತ, ನೀಲಿಮಯ ಆಗಸಕೆ
ಸಾರಿ ತನ್ನದೆಯಾಸೆ, ಕೆರಳಿ, ತಡಿಯನು ಮುತ್ತಿ
ನೊರೆಯಾಗಿ ಹರಿದಾಡಿ, ಮುರಿದಿರಲು ಮನದೆಣಿಕೆ
ಹಿಂದೋಡಿ, ಮಗುದೊಮ್ಮೆ ಮೈಲಿಯತ್ತರದೊಂದು
ಹಾವಿನಾಕಾರದಿಂ ಬಂದು ಹೆದರಿಸಹೊರಟು
ದಡದೆಡೆಗೆ ಸರಿದಂತೆ, ಹೆಡೆ ಭೂಮಿಗಿಳಿತಂದು
ಬರಿಯ ಅಡಿ ನೀರಾಗಿ, ಎದೆಯಾಸೆ ಸುಳಿಮುರುಟು
ಸಸಿಯಾಗಿ- ದ್ವೇಷದಿಂ, ಕೋಪದಿಂ, ಉರಿಹತ್ತಿ,
ಸಾಗರವು ಉರಿಯುತಿದೆ-ಕಂಪಲೆಯ ಉರಿಬತ್ತಿ!
*****
Related Post
ಸಣ್ಣ ಕತೆ
-
ದೇವರ ನಾಡಿನಲಿ
೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…
-
ಗುಲ್ಬಾಯಿ
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…
-
ಹಳ್ಳಿ…
ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…
-
ಜೀವಂತವಾಗಿ…ಸ್ಮಶಾನದಲ್ಲಿ…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
-
ದೇವರೇ ಪಾರುಮಾಡಿದಿ ಕಂಡಿಯಾ
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…