ಅಂದು – ಇಂದು

ಬಿಗುಮಾನ ಒಂದೆಡೆಗೆ ; ಬಿಂಕ ಮತ್ತೊಂದೆಡೆಗೆ.
ಬೇರಾವುದೋ ಹೊಸತು ಭಾವನಾವರಿಸಿರಲು
ಮೊದಲ ಪರಿಚಯದಂದು ಕಣ್ಣೆತ್ತಿ ನೋಡದೆಯೆ
ಮೌನದಲಿ ಮಾತುಗಳ ಮುಳುಗಿಸುತ ಹಿಗ್ಗಿದೆವು.
ಚಪಲ ಚಂಚಲ ಕಣ್ಣು ನೋಡಲೆಳಸುತಲಿತ್ತು!
ಹೃದಯ ಹರಿಯುತಲಿರಲು ಒಲವ ಹೊನಲಾಗುತಲಿ
ಅಂತು ಎಂತೋ ಏನೋ ತಂಗಾಳಿ ಬೀಸಿತ್ತು.
ಒಂದೆ ಹೂವರಳಿತ್ತು ನಮ್ಮಿರ್ವರೆದೆಗಳಲಿ!

ಆ ಹೂವ ಬಾಳಿಂದು ಚೂರು ಚೂರಾಗುತಿದೆ!
ಅಂದಿನಂತಲ್ಲಿಂದು ಅಗಲಿಕೆಯ ಅರುಣ ದಿನ!
ಆನಂದ ಸಾಗರದಿ ಮಿಂದ ಎರಡಾತ್ಮದೆದೆ
ದಳವೆಲ್ಲ ಬೇರಾಗಿ ಚೂರಾಗಿ ಅಳಿವ ದಿನ!
ಮೊದಲ ಪರಿಚಯದಂತೆ ಸಾವಿನೀ ದಿನವಲ್ಲ.
ಆದರೂ ಮೌನ ಮಾತಿನ ಮಸಣ!- ಇಧಿಯಿಲ್ಲ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿರೇಚನೆ
Next post ಒಂದು ಮಧ್ಯಾಹ್ನ

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…