ಅಂದು – ಇಂದು

ಬಿಗುಮಾನ ಒಂದೆಡೆಗೆ ; ಬಿಂಕ ಮತ್ತೊಂದೆಡೆಗೆ.
ಬೇರಾವುದೋ ಹೊಸತು ಭಾವನಾವರಿಸಿರಲು
ಮೊದಲ ಪರಿಚಯದಂದು ಕಣ್ಣೆತ್ತಿ ನೋಡದೆಯೆ
ಮೌನದಲಿ ಮಾತುಗಳ ಮುಳುಗಿಸುತ ಹಿಗ್ಗಿದೆವು.
ಚಪಲ ಚಂಚಲ ಕಣ್ಣು ನೋಡಲೆಳಸುತಲಿತ್ತು!
ಹೃದಯ ಹರಿಯುತಲಿರಲು ಒಲವ ಹೊನಲಾಗುತಲಿ
ಅಂತು ಎಂತೋ ಏನೋ ತಂಗಾಳಿ ಬೀಸಿತ್ತು.
ಒಂದೆ ಹೂವರಳಿತ್ತು ನಮ್ಮಿರ್ವರೆದೆಗಳಲಿ!

ಆ ಹೂವ ಬಾಳಿಂದು ಚೂರು ಚೂರಾಗುತಿದೆ!
ಅಂದಿನಂತಲ್ಲಿಂದು ಅಗಲಿಕೆಯ ಅರುಣ ದಿನ!
ಆನಂದ ಸಾಗರದಿ ಮಿಂದ ಎರಡಾತ್ಮದೆದೆ
ದಳವೆಲ್ಲ ಬೇರಾಗಿ ಚೂರಾಗಿ ಅಳಿವ ದಿನ!
ಮೊದಲ ಪರಿಚಯದಂತೆ ಸಾವಿನೀ ದಿನವಲ್ಲ.
ಆದರೂ ಮೌನ ಮಾತಿನ ಮಸಣ!- ಇಧಿಯಿಲ್ಲ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿರೇಚನೆ
Next post ಒಂದು ಮಧ್ಯಾಹ್ನ

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys