Home / ಕವನ / ಕವಿತೆ / ಕಾರಂಜಿ ಕೆರೆಯ ಬಳಿ

ಕಾರಂಜಿ ಕೆರೆಯ ಬಳಿ

ಗಾಳಿಯಲ್ಲಾವುದೋ ಕೋಗಿಲೆಯು ತನ್ನದೆಯ
ಅಳಲ ತೇಲಿಬಿಡುತ್ತಿದೆ. ದೂರದಲಿ ನೀಲಿಮೆಯ
ಆಗಸದಿಂದೊಂದು ಬಿಳಿಯನ್ನು ಸಿಡಿದಂತೆ
ನಕ್ಷತ್ರ ಮೂಡುತಿರೆ, ಮೂಡಲೋ ಬೇಡವೋ
ಎನುತ ಚಿಂತಿಸುತೊಂದು ಎಳತಾರೆ ಕತ್ತಲಲಿ
ಬೆದರಿ ಹೊದ್ದಿದೆ ಮುಸುಕು ! ಕಾರಂಜಿ ಕೆರೆಯಲ್ಲಿ
ಅಲಗುವುದೊ, ಮಲಗಿಹುದೊ, ಎನುವಂತೆ ಸುಳಿಯುತಿಹ
ಮೆಲ್ಲಲೆಗಳಾಳದಲಿ ನೆರಳುಗಳು ನಡುಗುತಿವೆ!
ಅವು ತೊಟ್ಟ ನೀರಂಗಿಯಲಿ ಕಾಲ ಮಾಡಿಟ್ಟ
ಹರುಕಿನಲಿ, ತಾರೆಗಳ ಛಾಯೆ ಅಲ್ಲಲ್ಲಿರಲು,
ದೂರದಲಿ, ಮೂಡಲಕೆ, ಕಂಬವೊಂದರ ಮೇಲೆ
ಮಂಕಡರಿ ಮಿಣುಕುತಿಹ ದೀಪದರೆನೆರಳೊಂದು
ಅಲೆಗಳಾಳದ ಇರುಳ ಭೇದಿಸುತ ಅತ್ತಿತ್ತ
ಒಸರುತಿದೆ. ಆ ಮೂಲೆಯೊಳಗೊಂದು ಬೆಳ್ವಕ್ಕಿ
ನೀರೊಳಗ ಮೀನುಗಳ ಸಂಸಾರವನು ಹೊಂಚಿ
ಕಾಯುತಿದೆ. ಇತ್ತ ಮೃಗಶಾಲೆಯಲಿ, ಬಂಧನದ
ಕೂಳನುಣ್ಣುತ ಮರುಗಿ, ಬಿಡುಗಡೆಗೆ ಹಂಬಲಿಸಿ,
ಒಲ್ಲದೆಯೆ ಬಲ್ಲಿದರ ಬಿಲ್ಗಳಿಗೆ ನೇಣಾಗಿ,
ಕಾತರದಿ, ಸಂಕಟದಿ, ಇರುಳಲೇ ನರಳುತಿಹ
ಹಾರು ಹಕ್ಕಿಗಳೆದೆಯ ಕೊರಗ ದನಿಯೊಳು ದನಿಯ
ಕೂಡಿಸಿವೆ ಕಾಡ ಹುಲಿ ಸಿಂಹಗಳು, ಅದ ಕೇಳಿ
ಮಾರುದನಿ, ಆ ಕಡೆಗೆ, ಮಾನವನ ಮುಗಿಲಾಸೆ
ಬಿಂಬಿಸುತ, ಚಾಮುಂಡಿ ಬೆಟ್ಟ ನೆಟ್ಟನೆ ನಿಂತು
ಮುಗಿಲಿಗೀಟಿಯ ಹಾಕಲೆನುವಂತೆ ನಿಮಿರಿಹುದ
ಕಂಡು ಹಿಂದೆಗೆಯುತಿದೆ; ಮೌನಕ್ಕೆ ಶರಣಾಗಿ
ನೀರಿನಲ್ಲಿ ಮುಳುಗುತಿದೆ, ನೀರ ಪಕ್ಕದ ಹಾದಿ
ತುಳಿಯುತಿಹ ಗೆಳಯರಗೊ, ಕತ್ತಲಲಿ ಬರಿಯೆರಡು
ನೆರಳಾಗಿ ಸರಿದಿಹರು. ಅವರಲೊಬ್ಬನ ದನಿಯ
ಹೆಣ್ತನದ ಮಾಧುರ್ಯ, ಅಳಿದ ಬಾಳಿನ ಒಂದು
ಸವಿಗನಸ ನನಸಂತೆ, ಹೃದಯದೊಳ ಇಂಚರದಿ
ಹಾಸು ಹೊಕ್ಕಾಗುತಿರೆ, ಮೈ ಮನಸು ಮೇಲೇರಿ
ಆಗಸದ ಮಡಿಲಿನಲಿ ಉಯಾಲೆಯಾಡುತಿಹ
ಬಿಳಿ ಮೋಡದೊಳಗೊಂದು ಕಣವಾಗಿ ಇಣುಕುತಿದೆ.
ಕೇಳುತಿದೆ- ಸ್ವರ್ಗದೊಳಗಿಂತು ಆತ್ಮೀಯತೆಯ,
ಗೆಳೆತನದ, ನೆನಪುಗಳ, ಪ್ರೇಮದುನ್ಮಾದಗಳ
ನೋವು ನಲೆಗಳುಂಟೆ ?- ಇಲ್ಲಿರಲು ಅಲ್ಲೆಲ್ಲಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...