ಏಳೆನ್ನ ಮನದನ್ನೆ

ಏಳೆನ್ನ ಮನದನ್ನೆ, ಏಳು ಚೆನ್ನಿಗ ಕನ್ನೆ
ಏಳು ಮೂಡಲ ಕೆನ್ನೆ ಕೆಂಪಾಯಿತು.
ಬಾಳ ಬೃಂದಾವನದಿ, ನಾಳೆಯೊಲವಿನ ರವದಿ,
ಆಸೆ ಮರೆಯುತಲಿಹುದು ಕಳೆದ ನಿನ್ನೆ!

ಕೊಳದ ನೀರಲಿ ಶಾಂತಿ ಮೂಡಿಹುದು, ರವಿ ಕಾಂತಿ
ಬೆಳ್ಳಿಯಲೆಗಳ ಭ್ರಾಂತಿ ಹೊಳೆಯುತಿಹುದು.
ತೀಡುತಿಹ ತಂಗಾಳಿ ಮಿಡಿಸದಿದೆ ಅಲೆಯೋಳಿ,
ಇಂತಿರಲು ಕಮಲಕಳಿ ನಡುಗುತಿಹುದು!

ಬಿರಿದ ಹೂವಿನೊಳೊಂದು ದುಂಬಿ ಇರುಳಲಿ ಬಂದು
ಒಲವಿನಲಿ ಮನ ನಿಂದು ಇರುಳನೆಲ್ಲ
ಕಮಲದಲಿ ಸೆರೆಯಾಗಿ, ಹೊರ ಜಗಕೆ ಮರೆಯಾಗಿ,
ನಡುಗಿಸಿದೆ ಹುಚ್ಚಾಗಿ ದಳವನೆಲ್ಲ!

ಅಂತೆ ನಿನ್ನೊಲವಿನಲಿ ನನ್ನೆದೆಯ ಗೀತದುಲಿ
ಶೃಂಗಾರದಳಗಳಲಿ ಸೆರೆಗೆ ಸಿಕ್ಕಿ,
ನಿನ್ನ ಬೇಡುತಲಿಹುದು, ತನ್ನ ನೀಡುತಲಿಹುದು.
ಎದ್ದೇಳು ಕಣ್ಣಮಣಿ, ನಿದ್ದೆ ಮಿಕ್ಕಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವರ
Next post ಹುಟ್ಟು

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys