ಏಳೆನ್ನ ಮನದನ್ನೆ

ಏಳೆನ್ನ ಮನದನ್ನೆ, ಏಳು ಚೆನ್ನಿಗ ಕನ್ನೆ
ಏಳು ಮೂಡಲ ಕೆನ್ನೆ ಕೆಂಪಾಯಿತು.
ಬಾಳ ಬೃಂದಾವನದಿ, ನಾಳೆಯೊಲವಿನ ರವದಿ,
ಆಸೆ ಮರೆಯುತಲಿಹುದು ಕಳೆದ ನಿನ್ನೆ!

ಕೊಳದ ನೀರಲಿ ಶಾಂತಿ ಮೂಡಿಹುದು, ರವಿ ಕಾಂತಿ
ಬೆಳ್ಳಿಯಲೆಗಳ ಭ್ರಾಂತಿ ಹೊಳೆಯುತಿಹುದು.
ತೀಡುತಿಹ ತಂಗಾಳಿ ಮಿಡಿಸದಿದೆ ಅಲೆಯೋಳಿ,
ಇಂತಿರಲು ಕಮಲಕಳಿ ನಡುಗುತಿಹುದು!

ಬಿರಿದ ಹೂವಿನೊಳೊಂದು ದುಂಬಿ ಇರುಳಲಿ ಬಂದು
ಒಲವಿನಲಿ ಮನ ನಿಂದು ಇರುಳನೆಲ್ಲ
ಕಮಲದಲಿ ಸೆರೆಯಾಗಿ, ಹೊರ ಜಗಕೆ ಮರೆಯಾಗಿ,
ನಡುಗಿಸಿದೆ ಹುಚ್ಚಾಗಿ ದಳವನೆಲ್ಲ!

ಅಂತೆ ನಿನ್ನೊಲವಿನಲಿ ನನ್ನೆದೆಯ ಗೀತದುಲಿ
ಶೃಂಗಾರದಳಗಳಲಿ ಸೆರೆಗೆ ಸಿಕ್ಕಿ,
ನಿನ್ನ ಬೇಡುತಲಿಹುದು, ತನ್ನ ನೀಡುತಲಿಹುದು.
ಎದ್ದೇಳು ಕಣ್ಣಮಣಿ, ನಿದ್ದೆ ಮಿಕ್ಕಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವರ
Next post ಹುಟ್ಟು

ಸಣ್ಣ ಕತೆ

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…