ಕನಸು ನನಸುಗಳೆಲ್ಲ

ಕನಸು ನನಸುಗಳೆಲ್ಲ ಯಾರಿಗೋ ಮುಡಿಪಾಗಿ
ಹಾಡುಗಳಲೆಲ್ಲೆಲ್ಲು ಯಾರದೋ ಛಾಯೆಯೇ
ಮೂಡಿರಲು, ಇದು ಯಾರು? ಎನುತ ಕಾತರರಾಗಿ
ಗೆಳೆಯರೆಲ್ಲರು ನನ್ನ ಕಾಡುತಿರೆ, ನಿನ್ನನೇ
ಬಣ್ಣಿಸಲು ಹೊರಟಿಹೆನು; ನಿನ್ನ ನೆನವಿನಲೆನ್ನ
ಮನದ ಮಾತುಗಳೆಲ್ಲ ರಂಗಾಗಿ ಹಾರುತಿದೆ!
ಒಂದು ಸಂಜೆಯ ಕನಸು ಬಾಳಿನಿರುಳಿನ ಮುನ್ನ
ಮೆರೆದು ಮರೆಯಾಗುವೊಲು, ದುಗುಡದಲಿ ಮಾಸುತಿವೆ!

ಸಾವ ಮಡಿಲಿನ ನಿನ್ನ ದುಗುಡದಲಿ ಒಲವಿರಲು
ಬಣ್ಣನೆಯ ಬಣ್ಣಕ್ಕೆ ನಿಲುಕದಿಹ ಅದನೆಂತು
ಪದಗಳಲಿ ಪದುವಿಡಲಿ? ಎದೆಯ ಕಂಬನಿ ಹರಿದು
ಬಾಳನಾವರಿಸುತಿದೆ! – ನಿನ್ನೊಲವ ಸುಖವಂತು
ಮುಗಿಲ ಮೋಡದಹಾಗೆ ಮಾಯವಾಗಿರಲಿಂದು,
ಉಳಿದಿಹುದು ಕಂಗಳಿಗೆ ಹಗಲುಗನಸಿನ ಬಿಂದು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮತ್ತೆ ಬಂದ ವಸಂತ
Next post ಚಿತ್ತ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys