ಗಂಧವತಿ

ಅವನ ಮಣ್ಣ ಪ್ರೀತಿ
ಬಾಳಿಗೆ ಬಂಗಾರ ಸಿಂಗಾರ
ದಿನಾಲೂ ಬೀಸುವ ಗಾಳಿಯ
ನೆತ್ತಿ ನೇವರಿಸಿ ಮಣ್ಣನೊಡನೆ ಮಾತನಾಡಿ
ಅವಳ ಹಿಗ್ಗಿಸಿ ರೋಮಾಂಚನಗೊಳಿಸುತ್ತಾನೆ
ಗಂಧವತಿ ಅವಳು ಎದೆ ತೆರೆದು ಹಸಿರು ಸೂಸುತ್ತಾಳೆ.

ಮೆದುವಾದ ಅವಳು, ಅವನು
ಬಿತ್ತಿದ ಬೀಜಕೆ ಬಸಿರಾಗಿ,
ಹೊಲದ ತುಂಬೆಲ್ಲಾ ಹಸಿರು ತೆನೆಕಾಳು;
ಒಸರಿದ ಹಾಲು ಹೀರಿದ ಹಕ್ಕಿಗಳು ಹಾರಿವೆ
ನೀಲ ಗಗನದ ತುಂಬ ಗಾಳಿಪಟ ಹಾಸಿವೆ.
ಅವಳೀಗ ಅವನು ಪೂಜಿಸುವ ದೇವತೆ.

ಮೊದಲ ಹನಿ ಸಿಂಚನಕೆ ಅವನು
ಮೋಡಗಳ ತೆಕ್ಕೆಗೆ ಸರಿದು ಹೋಗಿದ್ದಾನೆ,
ಸಂತೆಯಿಂದ ತಂದ ಬೀಜಗಳ ಅವಳ
ಉಡಿತುಂಬ ಸುರಿದಿದ್ದಾನೆ, ಯಾರ
ಮೋಹದಲಿ ಯಾರ ಊಹೆಯಲಿ,
ಯಾವ ಕಾಳಿನ ಮರ್ಮರ ಯೋಗಿಣಿ?

ಅವನ ಒಲವಿಗೆ ಅವಳ ಚಿಗುರು,
ಬಗೆ ಬಗೆದು ಹಬ್ಬಿ ಸಿಂಗರಗೊಂಡ
ಬಯಲು ಧ್ಯಾನ, ಮರದೊಳಗಿನ ಮೌನ,
ಬೆಳಕಿನ ಹಣತೆ ಹಚ್ಚಿದಾಗ ಬೀಗುವ
ಅವನು ಅವಳ ಮಡಿಲ ಕೂಸು
ದಾಯಿನಿ ಗಂಧವತಿಯ ಒಳ ಹೊರಗೂ ಚೈತನ್ಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೈಲಿನ್ಕಂಡಿ
Next post ಸೂರ್ಯಾಲಂಕಾರ

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

cheap jordans|wholesale air max|wholesale jordans|wholesale jewelry|wholesale jerseys