ಶ್ರೀಮಂತ ಬಡವರು

ಆಗರ್ಭ ಶ್ರೀಮಂತರ ಮಗಳಾಕೆ. ದಿನಾಲು ಶಾಲೆಗೆ ಕಾರಿನಲ್ಲಿ ಬಂದು ಹೋಗುವಳು. ಅವಳ ಚೆಂದದ ಪಾದಗಳಿಗೆ ಒಮ್ಮೆಯೂ ಮಣ್ಣು ತಗುಲಿರಲಿಲ್ಲ. ಮೈ ನೆಲದ ಸ್ಪರ್ಶ ಅನುಭವಿಸಿರಲಿಲ್ಲ. ಅವಳಿಗೆ ಬೇಕೆನೆಸಿದ್ದೆಲ್ಲ ಕ್ಷಣ ಮಾತ್ರದಲ್ಲಿ ದಕ್ಕುತ್ತಿತ್ತು. ಮಕಮಲ್ಲಿನ ಬಟ್ಟೆಯಂತಿತ್ತು ಅವಳ ಬದುಕು.

ಶಾಲೆಯಲ್ಲೂ ಅಷ್ಟೆ. ಅವಳಿಗೆ ಸ್ಪೆಷಲ್ಲಾಗಿ ಅಸನದ ವ್ಯವಸ್ಥೆ. ಎಲ್ಲರ ನಡವಳಿಕೆಗಳು ಅವಳಿಗೆ ಹಿತವೆನಿಸಿದ್ದವು. ಗೊಂಬೆಯಂತೆ ಕಾಣುತ್ತಿದ್ದ ಅವಳನ್ನು ಸಹಪಾಟಿಗಳು ಅದ್ಭುತವೆನ್ನುವಂತೆ ನೋಡುತ್ತಿದ್ದರು, ಮಾತನಾಡಲು ತವಕಿಸುತ್ತಿದ್ದರು.

ಒಂದಿನ ಒಬ್ಬ ಅಧ್ಯಾಪಕರು “ನಮ್ಮ ದೇಶದ ಬಡವರು” ಎಂಬ ವಿಷಯ ಕುರಿತು ಪ್ರಬಂಧ ಬರೆದುಕೊಂಡು ಬರಲು ಹೇಳಿದರು. ಮರುದಿನ ಎಲ್ಲರ ಪ್ರಬಂಧಗಳು ಅಧ್ಯಾಪಕರ ಕೈ ಸೇರಿದ್ದವು. ಎಲ್ಲ ವಿದ್ಯಾರ್ಥಿಗಳಿಗಿಂತ ಶ್ರೀಮಂತ ಹುಡುಗಿಯ ಪ್ರಬಂಧ ವಿಶೇಷವಾಗಿತ್ತು.

ಆಕೆ ಸುಂದರ ಅಕ್ಷರಗಳಲ್ಲಿ ನೀಟಾಗಿ ಬರೆದಿದ್ದಳು.

“ನಮ್ಮ ದೇಶದ ಬಡವರು ದೊಡ್ಡ ಬಂಗಲೆಗಳಲ್ಲಿ ವಾಸಿಸುವರು. ಅವರು ಕಾರಿನಲ್ಲಿ ಓಡಾಡುವರು. ಟಬ್‌ನಲ್ಲಿ ಸ್ನಾನ ಮಾಡುವರು. ಡೈನಿಂಗ್ ಟೇಬಲ್ ಮೇಲೆ ಕುಳಿತು ಟಿಫಿನ್, ಊಟ ಮಾಡುವರು. ಬ್ರೆಡ್ ಟೋಸ್ಟ್, ಬೆಣ್ಣೆ ದೋಸೆ, ಸಮೋಸಾ, ಪೇಡೆ, ಬರ್ಫಿ, ಗುಲಾಬ್ ಜಾಮೂನು ತಿನ್ನುವರು. ಹೋಳಿಗೆ, ತುಪ್ಪ, ಚಪಾತಿ, ಚಿತ್ರಾನ್ನ ಕೆನೆ ಮೊಸರು ಊಟ ಮಾಡುವರು. ಮುಂಜಾನೆ ಮತ್ತು ಸಂಜೆ ಗಟ್ಟಿಯಾದ ಹಾಲಿನ ಚಹ ಕುಡಿಯುವರು. ಸೇಬು, ಬಾಳೆಹಣ್ಣು, ದಾಳಂಬರಿ, ಕಿತ್ತಳೆ, ಮೋಸಂಬಿ, ಮಾವಿನ ಹಣ್ಣು, ದ್ರಾಕ್ಷಿ ಹಣ್ಣು ತಿನ್ನುವರು. ಬಿಸಲೇರಿ ನೀರು ಕುಡಿಯುವರು. ಟಿ.ವಿ. ನೋಡುವರು, ಮೆತ್ತನೆಯ ಮಂಚದ ಮೇಲೆ ಸೊಳ್ಳೆಪರದೆ ಕಟ್ಟಿಕೊಂಡು ಮಲಗುವರು. ನಸುಕಿನಲ್ಲೆದ್ದು ವಾಕಿಂಗ್ ಹೋಗುವರು, ಜಾಗಿಂಗ್ ಮಾಡುವರು….. ಇತ್ಯಾದಿ ಇತ್ಯಾದಿಯಾಗಿ ಪ್ರಬಂಧ ಮುಂದುವರಿದಿತ್ತು.

ಅಧ್ಯಾಪಕರಿಗೆ ಸುಸ್ತೋ ಸುಸ್ತು.

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೋಕಾಲಿ ಆಡೋಣ ಬರ್ರೆ
Next post ಕೋಲು ಕೋಲಿನ ಕೋಲು

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

cheap jordans|wholesale air max|wholesale jordans|wholesale jewelry|wholesale jerseys